Featured

ಮೋದಿಯಿಂದ ದೇಶ ವಿಭಜನೆ, ಬಿಎಸ್‍ವೈಯಿಂದ ರಾಜ್ಯ ವಿಭಜನೆ: ಆನಂದ್ ಅಸ್ನೋಟಿಕರ್

ಕಾರವಾರ: ಯುವಕರನ್ನು ಬಳಸಿ ಹಿಂದುತ್ವದ ಆಧಾರದ ಮೇಲೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ಯಡಿಯೂರಪ್ಪನವರು ಕರ್ನಾಟಕವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಕಿಡಿಕಾರಿದ್ದಾರೆ.

ಪ್ರತ್ಯೇಕ ರಾಜ್ಯ ಕುರಿತು ಮಾತನಾಡಿದ ಅವರು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಖ್ಯಾತಿಯನ್ನು ಸಹಿಸಲಾಗದೇ ಯಡಿಯೂರಪ್ಪನವರು ಹಾಗೂ ಬಿಜೆಪಿಯವರು ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡುವ ಕುರಿತು ರೈತರನ್ನು ಬಲಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಬಡ ರೈತರನ್ನು, ಯುವಕರನ್ನು ಬಳಸಿ ಹಿಂದುತ್ವದ ಆಧಾರದ ಮೇಲೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ಯಡಿಯೂರಪ್ಪನವರು ಕರ್ನಾಟಕವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಸ್ನೋಟಿಕರ್ ದೂರಿದರು.

ಯಡಿಯೂರಪ್ಪನವರು ಮುಖ್ಯಮಂತ್ರಿ ಆಗುವ ಸಾಧ್ಯತೆಗಳಿಲ್ಲ, ಕೇಂದ್ರದಲ್ಲಿ ಮಂತ್ರಿಯಾಗುತ್ತೇನೆ ಎನ್ನುವ ಉದ್ದೇಶವಿಟ್ಟುಕೊಂಡು ಹೀಗೆ ಮಾಡುತ್ತಿದ್ದಾರೆ. ಇವರ ಮೇಲಿರುವ ಕೇಸುಗಳನ್ನು ಮುಗಿಸಿಕೊಳ್ಳಬೇಕಿದೆ ಹೀಗಾಗಿ ಈ ರೀತಿ ಮಾಡುತ್ತಿದ್ದಾರೆ. ಇದೊಂದು ಪೊಲಿಟಿಕಲ್ ಗೇಮ್. ಮುಂಬರುವ ಲೋಕಸಭಾ ಚುನಾವಣೆಯೇ ಮುಖ್ಯ ಉದ್ದೇಶ ಎಂದು ತಿಳಿಸಿದರು.

ಅಮಿತ್ ಶಾ ರವರಿಗೆ ಕರ್ನಾಟಕದಲ್ಲಿ ತಾನೇನೋ ಮಾಡುತ ದ್ದೇನೆ ಎಂದು ತೋರಿಸಿಕೊಳ್ಳಲು ಯಡಿಯೂರಪ್ಪನವರು ಹೀಗೆ ಮಾಡುತ್ತಿದ್ದಾರೆ. ಅವರು ಇನ್ನು ಮುಂದೆ ರಾಜ್ಯದ ಮುಖ್ಯಮಂತ್ರಿಯಾಗುವುದಿಲ್ಲ. ಕುಮಾರಸ್ವಾಮಿಯವರ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುತ್ತದೆ. ತಾವು ವಿರೋಧ ಪಕ್ಷದಲ್ಲಿದ್ದು ರಾಜ್ಯಕ್ಕಾಗಿ ಒಳ್ಳೆಯ ಹೋರಾಟ ಮಾಡಿ ಎಂದು ಯಡಿಯೂರಪ್ಪನವರಿಗೆ ಸಲಹೆ ನೀಡಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago