ಕಾರವಾರ: ಯುವಕರನ್ನು ಬಳಸಿ ಹಿಂದುತ್ವದ ಆಧಾರದ ಮೇಲೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ಯಡಿಯೂರಪ್ಪನವರು ಕರ್ನಾಟಕವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಕಿಡಿಕಾರಿದ್ದಾರೆ.
ಪ್ರತ್ಯೇಕ ರಾಜ್ಯ ಕುರಿತು ಮಾತನಾಡಿದ ಅವರು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಖ್ಯಾತಿಯನ್ನು ಸಹಿಸಲಾಗದೇ ಯಡಿಯೂರಪ್ಪನವರು ಹಾಗೂ ಬಿಜೆಪಿಯವರು ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡುವ ಕುರಿತು ರೈತರನ್ನು ಬಲಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಬಡ ರೈತರನ್ನು, ಯುವಕರನ್ನು ಬಳಸಿ ಹಿಂದುತ್ವದ ಆಧಾರದ ಮೇಲೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ಯಡಿಯೂರಪ್ಪನವರು ಕರ್ನಾಟಕವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಸ್ನೋಟಿಕರ್ ದೂರಿದರು.
ಯಡಿಯೂರಪ್ಪನವರು ಮುಖ್ಯಮಂತ್ರಿ ಆಗುವ ಸಾಧ್ಯತೆಗಳಿಲ್ಲ, ಕೇಂದ್ರದಲ್ಲಿ ಮಂತ್ರಿಯಾಗುತ್ತೇನೆ ಎನ್ನುವ ಉದ್ದೇಶವಿಟ್ಟುಕೊಂಡು ಹೀಗೆ ಮಾಡುತ್ತಿದ್ದಾರೆ. ಇವರ ಮೇಲಿರುವ ಕೇಸುಗಳನ್ನು ಮುಗಿಸಿಕೊಳ್ಳಬೇಕಿದೆ ಹೀಗಾಗಿ ಈ ರೀತಿ ಮಾಡುತ್ತಿದ್ದಾರೆ. ಇದೊಂದು ಪೊಲಿಟಿಕಲ್ ಗೇಮ್. ಮುಂಬರುವ ಲೋಕಸಭಾ ಚುನಾವಣೆಯೇ ಮುಖ್ಯ ಉದ್ದೇಶ ಎಂದು ತಿಳಿಸಿದರು.
ಅಮಿತ್ ಶಾ ರವರಿಗೆ ಕರ್ನಾಟಕದಲ್ಲಿ ತಾನೇನೋ ಮಾಡುತ ದ್ದೇನೆ ಎಂದು ತೋರಿಸಿಕೊಳ್ಳಲು ಯಡಿಯೂರಪ್ಪನವರು ಹೀಗೆ ಮಾಡುತ್ತಿದ್ದಾರೆ. ಅವರು ಇನ್ನು ಮುಂದೆ ರಾಜ್ಯದ ಮುಖ್ಯಮಂತ್ರಿಯಾಗುವುದಿಲ್ಲ. ಕುಮಾರಸ್ವಾಮಿಯವರ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುತ್ತದೆ. ತಾವು ವಿರೋಧ ಪಕ್ಷದಲ್ಲಿದ್ದು ರಾಜ್ಯಕ್ಕಾಗಿ ಒಳ್ಳೆಯ ಹೋರಾಟ ಮಾಡಿ ಎಂದು ಯಡಿಯೂರಪ್ಪನವರಿಗೆ ಸಲಹೆ ನೀಡಿದರು.
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…