Featured

ಮೋದಿಯಿಂದ ಭ್ರಷ್ಟಾಚಾರ ರಹಿತ ಆಡಳಿತ ; ನಾಲ್ಕು ವರ್ಷಗಳ ಬಿಜೆಪಿ ಸರ್ಕಾರದ ಸಾಧನೆ ತೆರೆದಿಟ್ಟ ಸಂಸದ ನಳಿನ್ ಕುಮಾರ್

ಉಡುಪಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನಾಲ್ಕು ವರ್ಷಗಳನ್ನು ಪೂರೈಸಿದೆ. ಈ ಅವಧಿಯಲ್ಲಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂಬಂತೆ ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ನಾಲ್ಕು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸೋಮವಾರ ಪಕ್ಷದ ಕಚೇರಿಯಲ್ಲಿ  ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿಶ್ವಮಟ್ಟದಲ್ಲಿ ಭಾರತದ ಗೌರವವನ್ನು ಹೆಚ್ಚಿಸಿದ್ದಾರೆ ಎಂದರು.

150ಕ್ಕೂ ಹೆಚ್ಚು ದೇಶಗಳು ಯೋಗ ದಿನವನ್ನು ಆಚರಿಸುವ ಮೂಲಕ ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ಹಿಡಿದಿವೆ. ಜಿಡಿಪಿ ಪ್ರಮಾಣ ಹೆಚ್ಚಳವಾಗಿದೆ. ದೇಶ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದ್ದು, ಜನರು ಮೋದಿ ಅವರ ಆಡಳಿತ ವೈಖರಿಯನ್ನು ಮೆಚ್ಚಿಕೊಂಡಿದ್ದಾರೆ ಎಂದರು.

ವಿದ್ಯುತ್ ರಹಿತ ಗ್ರಾಮಗಳಿಗೆ ವಿದ್ಯುತ್, ಸ್ವಚ್ಛ ಭಾರತ ಯೋಜನೆಯಡಿ ಏಳೂವರೆ ಕೋಟಿ ಶೌಚಾಲಯಗಳ ನಿರ್ಮಾಣ, 3.80 ಕೋಟಿ ಜನರಿಗೆ ಸಿಲಿಂಡರ್ ಭಾಗ್ಯ, 31.60 ಕೋಟಿ ಜನರಿಗೆ ಜನಧನ್ ಬ್ಯಾಂಕ್‌ ಖಾತೆ, ಉದ್ಯಮ ಶೀಲತೆ ತರಬೇತಿ, ಜನರಿಕ್ ಔಷಧ ಮಳಿಗೆಗಳ ನಿರ್ಮಾಣ, ಕಡಿಮೆ ದರದಲ್ಲಿ ಹೃದಯಕ್ಕೆ ಅಳವಡಿಸುವ ಸ್ಟಂಟ್‌ಗಳ ಪೂರೈಕೆ, ಆಯುಷ್ಮಾನ್ ಆರೋಗ್ಯ ಯೋಜನೆ, ಗ್ರಾಮೀಣ ಭಾಗಗಳ ಡಿಜಿಟಲೀಕರಣ, ಹೀಗೆ, ಹಲವು ಜನೋಪಯೋಗಿ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದರು.‌

ಕೇಂದ್ರದಲ್ಲಿ ಸದೃಢ ಹಾಗೂ ಸ್ಥಿರ ಸರ್ಕಾರ ರಚನೆಯಾಗಿರುವುದರಿಂದ, ನೋಟು ಅಮಾನ್ಯೀಕರಣ, ಜಿಎಸ್‌ಟಿ, ಸರ್ಜಿಕಲ್‌ ಸ್ಟ್ರೈಕ್‌ನಂತಹ ದಿಟ್ಟ ನಿರ್ಧಾರಗಳನ್ನು ನರೇಂದ್ರ ಮೋದಿ ಅವರು ತೆಗೆದುಕೊಳ್ಳಲು ಸಾದ್ಯವಾಯಿತು. ಉಗ್ರರ ನುಸುಳಿವಿಕೆಗೆ ಕಡಿವಾಣ ಬಿದ್ದಂತಾಯಿತು. ನಾಲ್ಕು ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ ಹಾಗೂ ಕಪ್ಪುಚುಕ್ಕೆ ಇಲ್ಲದ ಆಡಳಿತ ನೀಡಲು ಸಾಧ್ಯವಾಯಿತು. ಚುನಾವಣೆಗೂ ಮುನ್ನ ದೇಶದ ಜನರಿಗೆ ನೀಡಿದ್ದ ಭರವಸೆಗಳನ್ನು ಮೋದಿ ಈಡೇರಿಸಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ಉದಯ ಕುಮಾರ್ ಶೆಟ್ಟಿ, ಪ್ರತಾಪ್ ಸಿಂಹ ನಾಯಕ್ ಕುಯಿಲಾಡಿ ಸುರೇಶ್ ನಾಯಕ್, ನವೀನ್ ಶೆಟ್ಟಿ ಅವರು ಇದ್ದರು.

 

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago