Featured

ಮೋದಿಯಿಂದ ಭ್ರಷ್ಟಾಚಾರ ರಹಿತ ಆಡಳಿತ ; ನಾಲ್ಕು ವರ್ಷಗಳ ಬಿಜೆಪಿ ಸರ್ಕಾರದ ಸಾಧನೆ ತೆರೆದಿಟ್ಟ ಸಂಸದ ನಳಿನ್ ಕುಮಾರ್

ಉಡುಪಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನಾಲ್ಕು ವರ್ಷಗಳನ್ನು ಪೂರೈಸಿದೆ. ಈ ಅವಧಿಯಲ್ಲಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂಬಂತೆ ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ನಾಲ್ಕು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸೋಮವಾರ ಪಕ್ಷದ ಕಚೇರಿಯಲ್ಲಿ  ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿಶ್ವಮಟ್ಟದಲ್ಲಿ ಭಾರತದ ಗೌರವವನ್ನು ಹೆಚ್ಚಿಸಿದ್ದಾರೆ ಎಂದರು.

150ಕ್ಕೂ ಹೆಚ್ಚು ದೇಶಗಳು ಯೋಗ ದಿನವನ್ನು ಆಚರಿಸುವ ಮೂಲಕ ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ಹಿಡಿದಿವೆ. ಜಿಡಿಪಿ ಪ್ರಮಾಣ ಹೆಚ್ಚಳವಾಗಿದೆ. ದೇಶ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದ್ದು, ಜನರು ಮೋದಿ ಅವರ ಆಡಳಿತ ವೈಖರಿಯನ್ನು ಮೆಚ್ಚಿಕೊಂಡಿದ್ದಾರೆ ಎಂದರು.

ವಿದ್ಯುತ್ ರಹಿತ ಗ್ರಾಮಗಳಿಗೆ ವಿದ್ಯುತ್, ಸ್ವಚ್ಛ ಭಾರತ ಯೋಜನೆಯಡಿ ಏಳೂವರೆ ಕೋಟಿ ಶೌಚಾಲಯಗಳ ನಿರ್ಮಾಣ, 3.80 ಕೋಟಿ ಜನರಿಗೆ ಸಿಲಿಂಡರ್ ಭಾಗ್ಯ, 31.60 ಕೋಟಿ ಜನರಿಗೆ ಜನಧನ್ ಬ್ಯಾಂಕ್‌ ಖಾತೆ, ಉದ್ಯಮ ಶೀಲತೆ ತರಬೇತಿ, ಜನರಿಕ್ ಔಷಧ ಮಳಿಗೆಗಳ ನಿರ್ಮಾಣ, ಕಡಿಮೆ ದರದಲ್ಲಿ ಹೃದಯಕ್ಕೆ ಅಳವಡಿಸುವ ಸ್ಟಂಟ್‌ಗಳ ಪೂರೈಕೆ, ಆಯುಷ್ಮಾನ್ ಆರೋಗ್ಯ ಯೋಜನೆ, ಗ್ರಾಮೀಣ ಭಾಗಗಳ ಡಿಜಿಟಲೀಕರಣ, ಹೀಗೆ, ಹಲವು ಜನೋಪಯೋಗಿ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದರು.‌

ಕೇಂದ್ರದಲ್ಲಿ ಸದೃಢ ಹಾಗೂ ಸ್ಥಿರ ಸರ್ಕಾರ ರಚನೆಯಾಗಿರುವುದರಿಂದ, ನೋಟು ಅಮಾನ್ಯೀಕರಣ, ಜಿಎಸ್‌ಟಿ, ಸರ್ಜಿಕಲ್‌ ಸ್ಟ್ರೈಕ್‌ನಂತಹ ದಿಟ್ಟ ನಿರ್ಧಾರಗಳನ್ನು ನರೇಂದ್ರ ಮೋದಿ ಅವರು ತೆಗೆದುಕೊಳ್ಳಲು ಸಾದ್ಯವಾಯಿತು. ಉಗ್ರರ ನುಸುಳಿವಿಕೆಗೆ ಕಡಿವಾಣ ಬಿದ್ದಂತಾಯಿತು. ನಾಲ್ಕು ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ ಹಾಗೂ ಕಪ್ಪುಚುಕ್ಕೆ ಇಲ್ಲದ ಆಡಳಿತ ನೀಡಲು ಸಾಧ್ಯವಾಯಿತು. ಚುನಾವಣೆಗೂ ಮುನ್ನ ದೇಶದ ಜನರಿಗೆ ನೀಡಿದ್ದ ಭರವಸೆಗಳನ್ನು ಮೋದಿ ಈಡೇರಿಸಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ಉದಯ ಕುಮಾರ್ ಶೆಟ್ಟಿ, ಪ್ರತಾಪ್ ಸಿಂಹ ನಾಯಕ್ ಕುಯಿಲಾಡಿ ಸುರೇಶ್ ನಾಯಕ್, ನವೀನ್ ಶೆಟ್ಟಿ ಅವರು ಇದ್ದರು.

 

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

23 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago