ರಾಜ್ಯದಲ್ಲಿ ಮೋದಿಯೆಂಬ ಸಿಂಹವನ್ನು ಅಡ್ಡಗಟ್ಟಲು ನಾಯಿ, ನರಿ ಹಾಗೂ ಜಿಗಣೆಗಳೆಲ್ಲವೂ ಒಟ್ಟು ಸೇರಿವೆ ಅಂತ ನಟ ಹಾಗೂ ಬಿಜೆಪಿ ಮುಖಂಡ ಜಗ್ಗೇಶ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಅಪಮಿತ್ರ ಮೈತ್ರಿಯನ್ನು ವಿರೋಧಿಸಿ ನಗರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಮಾತನಾಡಿದ ಜಗ್ಗೇಶ್, ಭಾರತೀಯ ಜನತಾ ಪಾರ್ಟಿ ಕಪ್ಪು ಪಟ್ಟಿ ಧರಿಸಿ ಕರಾಳ ದಿನವನ್ನು ಆಚರಿಸುತ್ತಿದೆ. ಮತವನ್ನು ನೀಡಿ ಭಾರತೀಯ ಜನತಾ ಪಕ್ಷವನ್ನು ಏಕಪಕ್ಷೀಯವಾಗಿ ಹೊರತಂದಿದ್ದೀರಿ. ಆದ್ರೆ ವಾಮಮಾರ್ಗದಿಂದ ನಮ್ಮನ್ನು ಪಕ್ಕಕಿಡಬೇಕು ಎನ್ನುವ ಷಡ್ಯಂತ್ರ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರ ಬೆವರಿನ ಹನಿಗೆ ಬೆಲೆ ಕೊಡುವ ಈ ಮೈತ್ರಿ ಸರ್ಕಾರಕ್ಕೆ ಧಿಕ್ಕಾರ ಅಂತ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಮೋದಿಯೆಂಬ ಈ ರಾಜ್ಯದ ಸಿಂಹವನ್ನು ಅಡ್ಡಗಟ್ಟಲು ನಾಯಿ, ನರಿ, ಜಿಗಣೆಗಳೆಲ್ಲ ಒಟ್ಟಿಗೆ ಸೇರಿರುವ ಕಾರ್ಯಕ್ರಮಗಳನ್ನು ನಾವು ನೀವು ನೋಡ್ತಾ ಇದ್ದೀವಿ. ನಿರೋದ್ಯೋಗಿ ಸಂಸ್ಥೆಗಳು ಮೋದಿಯವರ ಹೊಡೆತಗಳನ್ನು ತಾಳಲಾರದೆ ಮೂಲೆಗುಂಪಾದಂತಹ ಎಲ್ಲರೂ ಇವತ್ತು ಒಂದು ವೇದಿಕೆಯಲ್ಲಿ ಸೇರಿ ಮೋದಿಯನ್ನು ಮಣಿಸಲು ನಾವಿದ್ದೇವೆ ಎಂಬ ಭ್ರಮೆ ಹಾಗೂ ಚಿಂತನೆಯಿಂದ ಬಂದು ನಿಂತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇಂದು ಈ ನಾಡಿನ ಜನತೆಯ ಪರವಾಗಿ ಹೇಳುತ್ತಿದ್ದೇವೆ, ನಿಮಗೆಲ್ಲರಿಗೂ ಕೂಡ ಅದೇ ರೀತಿಯ ಮುಖಭಂಗ ಇನ್ನೂ ಮೂರು ತಿಂಗಳಲ್ಲಿ ಆಗಿಲ್ಲವೆಂದಲ್ಲಿ ಬೃಂದಾವನದಲ್ಲಿ ರಾಯರಿಲ್ಲ ಎನ್ನುಂತಹ ಮಾತನ್ನು ಹೇಳಲು ಇಷ್ಟ ಪಡುತ್ತೇನೆ ಅಂತ ಅವರು ಜಗ್ಗೇಶ್ ಸವಾಲೆಸೆದರು.
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…
50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…
ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ…
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…