ಬಾಗಲಕೋಟೆ : “ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರದ ಸಲುವಾಗಿ ಕೂದಲು ಮತ್ತು ಗಡ್ಡವನ್ನು ಬೆಳೆಸಿರಬೇಕು” ಎಂದು ಅಯೋಧ್ಯೆಯ ಶ್ರೀ ರಾಮ ಮಂದಿರ ಟ್ರಸ್ಟ್ನ ಸದಸ್ಯ ಮತ್ತು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ಡಿಸೆಂಬರ್ 27 ರ ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, “ಪಿಎಂ ಮೋದಿ ಆಧ್ಯಾತ್ಮಿಕತೆಯತ್ತ ಹೆಚ್ಚು ಒಲವು ತೋರುತ್ತಿದ್ದಾರೆ. ಹಿಂದೂ ಧರ್ಮದಲ್ಲಿ ‘ದೀಕ್ಷಾ ಬುದ್ಧ’ ಎಂದು ಕರೆಯುತ್ತಾರೆ. ರಾಮ ಮಂದಿರಕ್ಕೆ ಶಿಲಾನ್ಯಾಸ ಹಾಕುವುದರ ಮೂಲಕ ಮೋದಿ ರಾಮ ಮಂದಿರ ನಿರ್ಮಾಣದ ನೈತಿಕ ಜವಾಬ್ದಾರರಾಗಿದ್ದಾರೆ” ಎಂದು ಹೇಳಿದರು.
ನಮ್ಮಲ್ಲಿ ದೇವಸ್ಥಾನದ ಕಾರ್ಯ ಇಂತಹದ್ದೆಲ್ಲ ಇರುವಾಗ ನಾವು ದೀಕ್ಷಾ ಬದ್ಧರಾಗುತ್ತೇವೆ.ಈ ವೇಳೆ ಸಾಮಾನ್ಯವಾಗಿ ಗಡ್ಡ ಮತ್ತು ಕೇಶವನ್ನು ತೆಗೆಯುವುದಿಲ್ಲ. ಇನ್ನು ಅಯೋಧ್ಯೆ ರಾಮಮಂದಿರಕ್ಕೆ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದ್ದರು. ಹೀಗಾಗಿ ಅವರು ರಾಮಮಂದಿರ ಕಾರ್ಯಕ್ಕಾಗಿ ದೀಕ್ಷೆ ತೊಟ್ಟಿರಬಹುದು ಎಂದರು.
ಮಂದಿರದ ಸಂಪೂರ್ಣ ಜವಾಬ್ದಾರಿಯನ್ನು ಪ್ರಧಾನಿ ಮೋದಿ ಅವರೇ ಹೊತ್ತಿರುವುದರಿಂದ ಸಹಜವಾಗಿ ಇಂತಹ ಕಾರ್ಯದ ಸಮಯದಲ್ಲಿ ನಮ್ಮಲ್ಲಿ ಕೇಶಾದಿಗಳನ್ನು ತೆಗೆಯುವುದಿಲ್ಲ. ನೈತಿಕ ನೆಲೆಯಲ್ಲಿ ನಮ್ಮಲ್ಲಿ ಮಂದಿರ ಆಗುವ ತನಕ ಗಡ್ಡ, ತಲೆಗೂದಲು ಬಿಟ್ಟಿರುತ್ತೇವೆ. ಪ್ರಾಯಶಃ ಪ್ರಧಾನಿ ಮೋದಿ ಅದನ್ನು ಪಾಲನೆ ಮಾಡುತ್ತಿರಬಹುದು ಎಂದು ಹೇಳಿದರು.
“ರಾಮ ಮಂದಿರವನ್ನು ಮೂರೂವರೆ ವರ್ಷಗಳಲ್ಲಿ 1,500 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಅಂದಾಜಿಸಲಾಗಿದೆ. ನಿಜವಾಗಿ ಮಂದಿರದ ನಿರ್ಮಾಣಕ್ಕಾಗಿ 500 ಕೋಟಿ ವ್ಯಯಿಸಲಾಗುತ್ತದೆ. 1,000 ಕೋಟಿಯನ್ನು ಪರಿಸರ ಅಭಿವೃದ್ದಿ, ಯಾತ್ರಾರ್ಥಿಗಳಿಗೆ ವಸತಿ ಮತ್ತು ರಸ್ತೆಗಳ ನಿರ್ಮಾಣಕ್ಕಾಗಿ ವ್ಯಯಿಸಲಾಗುವುದು” ಎಂದು ತಿಳಿಸಿದರು.
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…
ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ : 18 ತಿಂಗಳ ಮಗು ನಿಧನ ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…