Featured

ಮೋದಿಯ ಗಡ್ಡದ ವಿಚಾರ ಬಹಿರಂಗ ಪಡಿಸಿದ ಪೇಜಾವರ ಶ್ರೀಪಾದರು -Vishwanews24

ಮೋದಿಯ ಗಡ್ಡದ ವಿಚಾರ ಬಹಿರಂಗ ಪಡಿಸಿದ ಪೇಜಾವರ ಶ್ರೀಪಾದರು -Vishwanews24

ಬಾಗಲಕೋಟೆ : “ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರದ ಸಲುವಾಗಿ ಕೂದಲು ಮತ್ತು ಗಡ್ಡವನ್ನು ಬೆಳೆಸಿರಬೇಕು” ಎಂದು ಅಯೋಧ್ಯೆಯ ಶ್ರೀ ರಾಮ ಮಂದಿರ ಟ್ರಸ್ಟ್‌ನ ಸದಸ್ಯ ಮತ್ತು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ಡಿಸೆಂಬರ್ 27 ರ ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, “ಪಿಎಂ ಮೋದಿ ಆಧ್ಯಾತ್ಮಿಕತೆಯತ್ತ ಹೆಚ್ಚು ಒಲವು ತೋರುತ್ತಿದ್ದಾರೆ. ಹಿಂದೂ ಧರ್ಮದಲ್ಲಿ ‘ದೀಕ್ಷಾ ಬುದ್ಧ’ ಎಂದು ಕರೆಯುತ್ತಾರೆ. ರಾಮ ಮಂದಿರಕ್ಕೆ ಶಿಲಾನ್ಯಾಸ ಹಾಕುವುದರ ಮೂಲಕ ಮೋದಿ ರಾಮ ಮಂದಿರ ನಿರ್ಮಾಣದ ನೈತಿಕ ಜವಾಬ್ದಾರರಾಗಿದ್ದಾರೆ” ಎಂದು ಹೇಳಿದರು.

ನಮ್ಮಲ್ಲಿ ದೇವಸ್ಥಾನದ ಕಾರ್ಯ ಇಂತಹದ್ದೆಲ್ಲ ಇರುವಾಗ ನಾವು ದೀಕ್ಷಾ ಬದ್ಧರಾಗುತ್ತೇವೆ.ಈ ವೇಳೆ ಸಾಮಾನ್ಯವಾಗಿ ಗಡ್ಡ ಮತ್ತು ಕೇಶವನ್ನು ತೆಗೆಯುವುದಿಲ್ಲ. ಇನ್ನು ಅಯೋಧ್ಯೆ ರಾಮಮಂದಿರಕ್ಕೆ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದ್ದರು. ಹೀಗಾಗಿ ಅವರು ರಾಮಮಂದಿರ ಕಾರ್ಯಕ್ಕಾಗಿ ದೀಕ್ಷೆ ತೊಟ್ಟಿರಬಹುದು ಎಂದರು.

ಮಂದಿರದ ಸಂಪೂರ್ಣ ಜವಾಬ್ದಾರಿಯನ್ನು ಪ್ರಧಾನಿ ಮೋದಿ ಅವರೇ ಹೊತ್ತಿರುವುದರಿಂದ ಸಹಜವಾಗಿ ಇಂತಹ ಕಾರ್ಯದ ಸಮಯದಲ್ಲಿ ನಮ್ಮಲ್ಲಿ ಕೇಶಾದಿಗಳನ್ನು ತೆಗೆಯುವುದಿಲ್ಲ. ನೈತಿಕ ನೆಲೆಯಲ್ಲಿ ನಮ್ಮಲ್ಲಿ ಮಂದಿರ ಆಗುವ ತನಕ ಗಡ್ಡ, ತಲೆಗೂದಲು ಬಿಟ್ಟಿರುತ್ತೇವೆ. ಪ್ರಾಯಶಃ ಪ್ರಧಾನಿ ಮೋದಿ ಅದನ್ನು ಪಾಲನೆ ಮಾಡುತ್ತಿರಬಹುದು ಎಂದು ಹೇಳಿದರು.

“ರಾಮ ಮಂದಿರವನ್ನು ಮೂರೂವರೆ ವರ್ಷಗಳಲ್ಲಿ 1,500 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಅಂದಾಜಿಸಲಾಗಿದೆ. ನಿಜವಾಗಿ ಮಂದಿರದ ನಿರ್ಮಾಣಕ್ಕಾಗಿ 500 ಕೋಟಿ ವ್ಯಯಿಸಲಾಗುತ್ತದೆ. 1,000 ಕೋಟಿಯನ್ನು ಪರಿಸರ ಅಭಿವೃದ್ದಿ, ಯಾತ್ರಾರ್ಥಿಗಳಿಗೆ ವಸತಿ ಮತ್ತು ರಸ್ತೆಗಳ ನಿರ್ಮಾಣಕ್ಕಾಗಿ ವ್ಯಯಿಸಲಾಗುವುದು” ಎಂದು ತಿಳಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago