Featured

ಮೋದಿ ಅಡ್ಜಸ್ಟ್ ಮೆಂಟ್ ರಾಜಕಾರಣ ಮಾಡುತ್ತಿದ್ದಾರೆ :  ರಾಹುಲ್ ಗಾಂಧಿ – vishwanews24

ಮೋದಿ ಅಡ್ಜಸ್ಟ್ ಮೆಂಟ್ ರಾಜಕಾರಣ ಮಾಡುತ್ತಿದ್ದಾರೆ :  ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಆಕ್ಷೇಪ

ನನ್ನನ್ನು ಹಲವಾರು ಬಾರಿ ಮಾತನಾಡುವುದರಿಂದ ತಡೆಯಲಾಗಿದೆ : ರಾಹುಲ್ ಗಾಂಧಿ ಆರೋಪ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂಬ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಸದಸ್ಯರು ಭಾರೀ ಆಕ್ಷೇಪ ವ್ಯಕ್ತಪಡಿಸಿದರು.

ಸಂಸತ್ತಿನಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ನಾನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹೊಂದಾಣಿಕೆ ಬಗ್ಗೆ ಮೂಲಭೂತ ಪ್ರಶ್ನೆಯನ್ನು ಎತ್ತಲು ಬಯಸುತ್ತೇನೆ. ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಾಣೆ ಹಾಗೂ ಜೆಫ್ರಿ ಎಪ್ಸ್ಟೈನ್ ಗೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಿದಾಗ ಚರ್ಚೆಯನ್ನು ಮುಂದುವರಿಸಲು ನನ್ನನ್ನು ಕಳೆದ ಬಾರಿ ತಡೆದರು” ಎಂದು ಆರೋಪಿಸಿದರು.

ಇದನ್ನೂ ಓದಿ:

“ಇದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಅವಕಾಶ ನೀಡದ ಮೊದಲ ಘಟನೆ. ಪ್ರಧಾನ ಮಂತ್ರಿಗಳು ಯಾವುದೇ ರೀತಿಯಲ್ಲಿ ರಾಜಿಮಾಡಿಕೊಂಡಿಲ್ಲ. ಮಾಡಲು ಸಾಧ್ಯ ಕೂಡ ಇಲ್ಲ” ಎಂದು ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಆರೋಪವನ್ನು ತಳ್ಳಿಹಾಕಿದರು.

ಈ ವೇಳೆ “ತಮ್ಮನ್ನು ಹಲವಾರು ಬಾರಿ ಮಾತನಾಡುವುದರಿಂದ ತಡೆಯಲಾಗಿದೆ. ಲೋಕಸಭೆ ಭಾರತ ಜನರ ಧ್ವನಿಯನ್ನು ಪ್ರತಿನಿಧಿಸುತ್ತದೆ, ಒಂದೇ ರಾಜಕೀಯ ಪಕ್ಷವನ್ನು ಮಾತ್ರವಲ್ಲ, ವಿರೋಧ ಪಕ್ಷದ ಸದಸ್ಯರಿಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ನೀಡಲಾಗುತ್ತಿಲ್ಲ” ಎಂದು ಪ್ರಜಾಸತ್ತಾತ್ಮಕ ವ್ಯವಸ್ಥೆಯ ಕಾರ್ಯಪದ್ಧತಿ ಹಾಗೂ ಸಭಾಧ್ಯಕ್ಷರ ಪಾತ್ರದ ಕುರಿತು ರಾಹುಲ್ ಗಾಂಧಿ ಪ್ರಶ್ನಿಸಿದರು.

“ಇಲ್ಲಿ ನಡೆಯುತ್ತಿರುವ ಚರ್ಚೆ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಮತ್ತು ಸಭಾಧ್ಯಕ್ಷರ ಪಾತ್ರದ ಬಗ್ಗೆ ಅನೇಕ ಬಾರಿ ನನ್ನ ಹೆಸರನ್ನು ಎತ್ತಿ ನನ್ನ ಬಗ್ಗೆ ಅನೇಕ ಆರೋಪಗಳನ್ನು ಮಾಡಲಾಗಿದೆ. ಈ ಸದನವು ಭಾರತದ ಜನರ ಅಭಿವ್ಯಕ್ತಿ. ಇದು ಒಂದೇ ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಇಡೀ ದೇಶವನ್ನು ಪ್ರತಿನಿಧಿಸುತ್ತದೆ. ನಾವು ಮಾತನಾಡಲು ಎದ್ದಾಗಲೆಲ್ಲ ನಮ್ಮನ್ನು ತಡೆಯಲಾಗುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ:

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

16 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

16 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

16 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

19 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

20 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

20 hours ago