ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭವಿಷ್ಯ ನುಡಿದಿದ್ದಾರೆ.
ಕಳೆದ ಲೋಕಸಭಾ ಚುನಾವಣೆ ವೇಳೆ ಮತದಾರರಿಗೆ ನೀಡಿದ್ದ ಯಾವೊಂದು ಭರವಸೆಯನ್ನೂ ಈಡೇರಿಸಲು ಸಾಧ್ಯವಾಗಿಲ್ಲ. 2019ರ ಲೋಕಸಭಾ ಚುನಾವಣೆಯಲ್ಲಿ ಮರಳಿ ಅವರು ಅಧಿಕಾರಕ್ಕೆ ಬರುವುದು ಕನಸಿನ ಮಾತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಆದಿಲಾಬಾದ್ನಲ್ಲಿ ಶನಿವಾರ ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
‘70 ವರ್ಷಗಳಲ್ಲಿ ಕಾಂಗ್ರೆಸ್ ಬಡವರಿಗಾಗಿ ಏನು ಮಾಡಿದೆ ಎಂದು ಮೋದಿ ಪದೇ ಪದೇ ಕೇಳುತ್ತಾರೆ. ಈ ದೇಶದ ಬಡವರ ಚೌಕಿದಾರರಾಗಬೇಕಿದ್ದ ಪ್ರಧಾನಿಯು ಕೇವಲ ಶ್ರೀಮಂತ ಉದ್ಯಮಿಗಳ ಚೌಕಿದಾರರಾಗಿರುವುದು ವಿಪರ್ಯಾಸ’ ಎಂದು ಲೇವಡಿ ಮಾಡಿದ್ದಾರೆ.
ತೆಲಂಗಾಣ ಪ್ರತ್ಯೇಕ ರಾಜ್ಯವಾದ ನಂತರ ಟಿಆರ್ಎಸ್ ಪಕ್ಷದ ಕೆ. ಚಂದ್ರಶೇಖರ್ ರಾವ್ ಕುಟುಂಬ ಮಾತ್ರ ಅದರ ಲಾಭ ಪಡೆಯುತ್ತಿದೆ ಎಂದು ರಾಹುಲ್ ಗಾಂಧಿ ಟೀಕಿಸಿದರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…