ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಬಂದು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿ, ಆವಾಗ ಗೊತ್ತಾಗುತ್ತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಬಿಜೆಪಿಯನ್ನು ದೂರವಿಡುವ ಉದ್ದೇಶದಿಂದಲೇ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್-ಜೆಡಿಎಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಯನ್ನು ಮಣಿಸಲು ತಯಾರಿ ನಡೆಸುತ್ತಿದೆ. ಮೈತ್ರಿ ನಾಯಕರು ಆಪರೇಷನ್ ಕಮಲ ವಿರೋಧಿಸಿ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ಧಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 22 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪ್ರಧಾನಿ ಮೋದಿ ಅವರು ಬರೀ ಸುಳ್ಳು ಹೇಳುತ್ತಾರೆ. ಭಾನುವಾರ ರಫೇಲ್ ಬಗ್ಗೆ ದೇಶದ ಚೌಕಿದಾರ ಮಾತಾಡಿಲ್ಲ. ರೈತರ ಸಾಲವನ್ನು ಅವರೇಕೆ ಮನ್ನಾ ಮಾಡಿಲ್ಲ ಎಂದು ಪ್ರಶ್ನಿಸಿದರು. ನಾವು ಈ ವರ್ಷದ ಬಜೆಟ್ ನಲ್ಲಿ ರೈತರ ಸಾಲಮನ್ನಾಕ್ಕೆ ಹಣ ಇಟ್ಟಿದ್ದೇವೆ. ಮೋದಿಯವರಿಗೆ ಸುಳ್ಳು ಹೇಳುವುದನ್ನು ಬಿಟ್ಟು ಬೇರೇನು ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…