Featured

ಮೋದಿ ಅವರು ಬಂದ ಮೇಲೆ  ತನಿಖಾ ಸಂಸ್ಥೆಗಳು ಕಾನೂನಿನ ಪ್ರಕಾರ ನಡೆಯುತ್ತಿಲ್ಲ : ಸಿದ್ದರಾಮಯ್ಯ – Vishwanews24

ಬಿಜೆಪಿ ಇ.ಡಿ., ಐಟಿ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ..

ಈ ದೇಶಕ್ಕೆ ಚರ್ಚೆ ಮಾಡಿ, ಸಂವಿಧಾನ ಕೊಟ್ಟವರು ಕಾಂಗ್ರೆಸ್ ನವರು

ಆರ್ ಎಸ್‌ಎಸ್ ನವರು ಹಿಟ್ಲರನ್ನು ಹಾಡಿ ಹೊಗಳಿದ್ದು ಇತಿಹಾಸದಲ್ಲಿದೆ

ಬೆಂಗಳೂರು: ಜನರಿಗೆ ತಪ್ಪು ಮಾಹಿತಿ ಕೊಡುವ ಕೆಲಸ ಬಿಜೆಪಿ ಮಾಡುತ್ತಿದೆ. ನಾವು ಯಾರು ಕೂಡ ಕಾನೂನನ್ನು ಮೀರಿದವರಲ್ಲ. ಆದರೆ ತನಿಖಾ ಸಂಸ್ಥೆಗಳ ಮೋದಿ ಅವರು ಬಂದ ಮೇಲೆ ಕಾನೂನಿನ ಪ್ರಕಾರ ನಡೆಯುತ್ತಿಲ್ಲ. ಇ.ಡಿ., ಐಟಿ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ಫ್ರೀಂಡಂ ಪಾರ್ಕ್‌ನಿಂದ ರಾಜಭವನದವರೆಗೆ ಗುರುವಾರ ನಡೆದ ಪ್ರತಿಭಟನಾ ಮೆರವಣಿಗೆಯ ಕಾರ್ಯಕ್ರಮದ ಅಂಗವಾಗಿ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಕರೆದ ಇಡಿ ಕಚೇರಿಗೆ ಮುತ್ತಿಗೆ ಹಾಕಿದ್ದೇವೆ. ಬಿಜೆಪಿಗೆ ಪರ್ಯಾಯ ಕಾಂಗ್ರೆಸ್, ಹಾಗಾಗಿ ಕಾಂಗ್ರೆಸ್ ಅನ್ನ ಮುಗಿಸಬೇಕು ಎಂದು ಹೊರಟಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತ ಎಂದು ಅನೇಕ ಬಾರಿ ಮೋದಿ,ಅಮಿತ್ ಶಾ ಹೇಳಿದ್ದಾರೆ. ಕಾಂಗ್ರೆಸ್ ಬಗ್ಗೆ ಬಿಜೆಪಿಗೆ ಭಯವಿದೆ.ಅನೇಕ ಜನ ಹೇಳಿದ್ದಾರೆ. ಸೋನಿಯಾ, ರಾಹುಲ್ ಗಾಂಧಿ ಅವರ ಮೇಲೆ ಕೇಸ್ ಇಲ್ಲ. ಎಫ್ ಐ ಆರ್ ಇಲ್ಲದೆ, ಕೋರ್ಟ್ ಸಮನ್ಸ್ ವಾರೆಂಟ್, ವಿಚಾರಣೆ ಮಾಡಲು ಆಗುವುದಿಲ್ಲ.ಸುಮ್ಮನೆ ಮಾಡಲು ಆಗುವುದಿಲ್ಲ ಎಂದು ಕಾನೂನು ತಿಳಿದಿವರಿಗೆ ಗೊತ್ತಿದೆ.ನಾನು ವಕೀಲರಲ್ಲಿ‌ ಮನವಿ ಮಾಡುತ್ತೇನೆ. ಇಂತಹ ಸುಳ್ಳು ಕೇಸ್ ಗಳನ್ನು ಬಯಲು ಮಾಡಬೇಕು ಎಂದು ಮನವಿ ಮಾಡುತ್ತೇನೆ. ಈ ದೇಶಕ್ಕೆ ಚರ್ಚೆ ಮಾಡಿ, ಸಂವಿಧಾನ ಕೊಟ್ಟವರು ಕಾಂಗ್ರೆಸ್ ನವರು ಎಂದರು.

ಬಿಜೆಪಿಯವರಿಗೆ ಸಂವಿಧಾನದ ಬಗ್ಗೆ ಗೌರವ ಇದೆಯಾ, ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ, ಸರ್ವಾಧಿಕಾರದಲ್ಲಿ ನಂಬಿಕೆ ಇಟ್ಟುಕೊಂಡವರು, ಹಾಗಾಗಿ ಆರ್ ಎಸ್ ಎಸ್ ನವರು ಹಿಟ್ಲರ್ ಅನ್ನು ಹಾಡಿ ಹೊಗಳಿದ್ದು ಇತಿಹಾಸದಲ್ಲಿದೆ.ಸ್ವಾತಂತ್ರ್ಯಕ್ಕಾಗಿ ಇವರು ಹೋರಾಟ ಮಾಡಿಲ್ಲ. ಒಂದು ದಿನವಾದರೂ ಸಾರ್ವಕರ್, ಹೆಡ್ಗೆವಾರ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಾರಾ.ಸಾರ್ವಕರ್ ದೇಶ ಪ್ರೇಮಿ ಎಂದು ಹೇಳುತ್ತಾರೆ. ಆದರೆ ಸಾರ್ವಕರ್ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ನಾನು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ, ನನ್ನನ್ನು ಬಿಟ್ಟು ಬಿಡಿ ಎಂದು ಮನವಿ ಮಾಡಿದ್ದರು ಎಂದು ಸಿದ್ದರಾಮಯ್ಯ ವ್ಯಂಗ್ಯ ಮಾಡಿ ತೋರಿಸಿದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

11 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago