ನವದೆಹಲಿ: ಮೋದಿ ಉಪನಾಮ ಪ್ರಕರಣದಲ್ಲಿ ನಾನು ತಪ್ಪಿಸ್ಥನಲ್ಲ ಹಾಗಾಗಿ ನಾನು ಕ್ಷಮೆ ಯಾಚಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಸುಪ್ರೀಂ ಕೋರ್ಟ್ನಲ್ಲಿ ತಿಳಿಸಿದ್ದಾರೆ.
ಪ್ರಕರಣದಲ್ಲಿ ರಾಹುಲ್ ದೋಷಿ ಎಂದು ಗುಜರಾತ್ ನ್ಯಾಯಾಲಯ ನೀಡಿರುವ ತೀರ್ಪನ್ನು ವಜಾಗೊಳಿಸುವಂತೆ ಕೋರಿ ರಾಹುಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೇ, ಈ ಸಂಬಂಧಿಸಿದ ಅಫಿಡವಿಟ್ ಅನ್ನೂ ಸಲ್ಲಿಸಿದ್ದಾರೆ. ಈ ವೇಳೆ ತಾನು ಪ್ರಕರಣದಲ್ಲಿ ಕ್ಷಮೆಯಾಚಿಸಿ ಖುಲಾಸೆ ಮಾಡಿಕೊಳ್ಳಬೇಕಿದಿದ್ದರೆ, ಅದನ್ನು ಯಾವತ್ತೋ ಮಾಡುತ್ತಿದ್ದೆ. ಆದರೆ, ನಾನು ಇದರಲ್ಲಿ ದೋಷಿಯೇ ಅಲ್ಲ, ಹಾಗಿದ್ದಾಗ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದಾರೆ.
ಮೋದಿ ಎಂಬ ಸಮುದಾಯಕ್ಕೆ ನನ್ನ ಮಾತಿಂದ ನೋವುಂಟಾಗಿದೆ ಎಂಬುದು ಸರಿಯಲ್ಲ.ಮೋದಿ ಎನ್ನುವ ಸಮುದಾಯವೇ ಇಲ್ಲ. ಹೀಗಿರುವ ನನ್ನ ಮಾತು ನೋವುಂಟಾಗುವುದು ಹೇಗೆ. ಮೋದಿ ವನಿಕ ಸಮಾಜ್ ಹಾಗೂ ಮೋದಿ ಘಂಚಿ ಸಮಾಜ್ ಮಾತ್ರ ಇರುವುದು ಎಂದು ರಾಹುಲ್ ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…