ಕಲಬುರಗಿ: ಕರ್ನಾಟಕ ಸರ್ಕಾರ ರೈತರ ವಿರೋಧಿಯಾಗಿದೆ..ಈ ಸರ್ಕಾರವನ್ನು ರೈತರು ಎಂದಿಗೂ ಕ್ಷಮಿಸುವುದಿಲ್ಲ. ರೈತರ ಯೋಜನೆಗಳಿಗೆ ರಾಜ್ಯ ಸರ್ಕಾರ ಅಡ್ಡಗೋಡೆಯಾಗಿದೆ. ರಿಮೋಟ್ ನಿಂದ ಆಡಳಿತ ನಡೆಸುತ್ತಿರುವ ಕುಮಾರಸ್ವಾಮಿ ರೈತರ ಪಟ್ಟಿಯನ್ನೇ ಕೊಟ್ಟಿಲ್ಲ. ರೈತರ ಖಾತೆಗೆ ಕೇಂದ್ರದ ನಗದು ಜಮೆಗೆ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಡ್ಡಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬುಧವಾರ ಕಲಬುರಗಿಯ ನೂತನ ವಿದ್ಯಾಲಯ ಮೈದಾನದಲ್ಲಿ ಬಿಜೆಪಿಯ ಬೃಹತ್ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರ ಬದ್ಧ ವಿರೋಧಿ ಸರ್ಕಾರ ಕರ್ನಾಟಕದಲ್ಲಿ ಅಧಿಕಾರದಲ್ಲಿದೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ರೈತರ ಪರವಾಗಿ, ಬಂಜಾರಾ ಸಮುದಾಯ ಸೇರಿದಂತೆ ಎಲ್ಲರ ಪರವಾಗಿ ನಿರಂತರವಾಗಿ ಕೆಲಸ ಮಾಡುತ್ತಿದೆ.
ಕೇಂದ್ರ ಸರ್ಕಾರ ಒಂದು ರೂಪಾಯಿ ನೀಡಿದರೂ ಕೂಡಾ ಅದು ರೈತರ, ಬಡವರ ಖಾತೆಗೆ ನೇರವಾಗಿ ಜಮೆ ಆಗಲಿದೆ. ಈ ಹಿಂದೆ ಸುಳ್ಳು ದಾಖಲೆ ಸೃಷ್ಟಿಸಿ ಭ್ರಷ್ಟಾಚಾರ ಮಾಡುತ್ತಿದ್ದರು. ಹೀಗಾಗಿ ಮೋದಿ ಇರುವವರೆಗೆ ಕಳ್ಳರ ಅಂಗಡಿ ಬಂದ್ ಆಗಲಿದೆ ಎಂದು ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದರು. ಈಗ 56 ಇಂಚಿನ ಹೆಸರು ಕೇಳಿದರೆ ಸಾಕು ಕಾಂಗ್ರೆಸ್ ಪಕ್ಷದ ನಿದ್ದೆಗೆಡತೊಡಗಿದೆ ಎಂದು ನೇರವಾಗಿ ಚಾಟಿ ಬೀಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…