ಮೋದಿ ತಮ್ಮ ಶ್ರಮದಿಂದ ಪ್ರಧಾನಿ ಹುದ್ದೇಗೇರಿದವರು ; ಅವರು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ: ಸಿ.ಟಿ.ರವಿ

ಉಡುಪಿ, ರಾಜ್ಯ ನ್ಯೂಸ್

ಬೆಂಗಳೂರು: ಹಣ, ಜಾತಿ, ಕುಟುಂಬದ ರಾಜಕೀಯ ಹಿನ್ನೆಲೆಯುಳ್ಳ ಕೆಲವರು ಈ ಹಿಂದೆ ಪ್ರಧಾನಿಯಾಗಿದ್ದಾರೆ. ಆದರೆ, ತಮ್ಮ ಶ್ರಮದಿಂದ ಪ್ರಧಾನಿ ಹುದ್ದೇಗೇರಿದವರು ನರೇಂದ್ರ ಮೋದಿ’ ಎಂದು ಶಾಸಕ ಸಿ.ಟಿ.ರವಿ ಹೇಳಿದರು.

ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ರಾಷ್ಟ್ರಧರ್ಮ ಆಯೋಜಿಸಿದ್ದ “ಮೋದಿ ಮತ್ತೊಮ್ಮೆ” ವಿಡಿಯೋ ಹಾಡಿನ್ನು ಬಿಡುಗಡೆಗೊಳಿಸಿ ಮಾತನಾಡಿ, ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿ  ನರೇಂದ್ರ ಮೋದಿ. ಜಾತಿ, ಹಣ ಹಾಗೂ ಕುಟುಂಬದ ರಾಜಕೀಯ ಹಿನ್ನಲೆ ಇಲ್ಲದೆ ತಮ್ಮ ಶ್ರಮದಿಂದ ಪ್ರಧಾನಿ ಹುದ್ದೇಗೇರಿದವರು ನರೇಂದ್ರ ಮೋದಿ ಎಂದರು.

‘ಅದೃಷ್ಟದ ಮೂಲಕ ಅಧಿಕಾರಕ್ಕೆ ಏರಿದರು ಮನಮೋಹನ್ ಸಿಂಗ್. ಆದರೆ, ಆಡಳಿತ ನಡೆಸಿದ್ದು ಮಾತ್ರ ಸೋನಿಯಾ ಗಾಂಧಿ. ಸಚಿವ ಸಂಪುಟಕ್ಕೆ ಕಿಮ್ಮತ್ತು ನೀಡದಂತಹ ಸ್ಥಿತಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿತ್ತು. ಆದರೆ, ಸಂಪುಟವನ್ನು ಪ್ರಜಾಪ್ರಭುತ್ವದ ದೇಗುಲ ಎಂದು ಕರೆದವರು ಮೋದಿ’ ಎಂದು ಹೇಳಿದರು.

ದೇಶದ ಅಭಿವೃದ್ದಿಯ ಬಗ್ಗೆ ತಮ್ಮದೇ ಆದ ವಿಶಿಷ್ಟ ಕನಸನ್ನುಹೊಂದಿರುವ ಪ್ರಧಾನಿ ಪ್ರಾಮಾಣಿಕವಾಗಿ ತಮ್ಮ ಕೆಲಸವನ್ನು ಪ್ರಾರಂಭಿಸಿದರು. ಮೊದಲು ದೇಶದ ಅಭಿವೃದ್ದಿಗೆ ಸುಧಾರಣೆಗಳನ್ನು ಪ್ರಾರಂಭಿಸಿದರು. ನಂತರ ಫಸಲ ಬಿಮಾ ಯೋಜನೆ, ಜನಧನ ಯೋಜನೆ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ನೀಡುವ ಮೂಲಕ ದೇಶದ ಜನಸಾಮಾನ್ಯರ ಅಭಿವೃದ್ದಿಗೆ ಕಾರಣೀಕರ್ತರಾಗಿದ್ದಾರೆ. ಇಂತಹ ಕನಸುಗಳನ್ನು ಹೊಂದಿರುವ ಪ್ರಧಾನಿಯವರು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.

ರಂಗಕರ್ಮಿ ಪ್ರಕಾಶ್ ಬೆಳವಾಡಿ ಮಾತನಾಡಿ, ದೇಶದ ಅಭಿವೃದ್ದಿಗೆ ಮೋದಿ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಮೊದಿಯವರು ಘನತೆಯನ್ನು ಕಾಪಾಡುವ ಕರ್ತವ್ಯ ಬಿಜೆಪಿ ಕಾರ್ಯಕರ್ತರಿಗೆ ಇದೆ. ಅವರ ಕಾರ್ಯಗಳ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸುವ ಅಗತ್ಯ ವಿದೆ. ಕೇಂದ್ರ ಸರಕಾರ ಕಳೆದ 4 ವರ್ಷಗಳಿಂದ ದೇಶದ ಜನಸಾಮಾನ್ಯರ ಅಭಿವೃದ್ದಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದನ್ನು ಜನಸಾಮಾನ್ಯರಿಗೆ ತಲುಪಿಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.

ಮೋದಿ ಮತ್ತೊಮ್ಮೆ ಹಾಡನ್ನು ಚೇತನ್ ನಿರ್ದೇಶಿಸಿದ್ದು, ವಾಗೀಶ್ ಚನ್ನಗಿರಿ ಅವರ ಸಾಹಿತ್ಯವಿದೆ. ದೇಸಿ ಮೋಹನ್ ಮತ್ತು ಪಂಚಮ್ ಜೀವ ಸಂಗೀತ ನಿರ್ದೇಶನ ಮಾಡಿದ್ದಾರೆ. ಅಶೋಕ್ ನಾಡಿಗ್ ನೇತೃತ್ವದಲ್ಲಿ ಛಾಯಾಗ್ರಹಣ ಹಾಗೂ ಸಂಕಲನ ನಡೆದಿದೆ. ಈ ಹಾಡನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ತಲುಪಿಸಬೇಕೆಂಬುದು ತಂಡದ ಉದ್ದೇಶವಾಗಿದೆ.