ಉಡುಪಿ

ಮೋದಿ ತಮ್ಮ ಶ್ರಮದಿಂದ ಪ್ರಧಾನಿ ಹುದ್ದೇಗೇರಿದವರು ; ಅವರು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ: ಸಿ.ಟಿ.ರವಿ

ಬೆಂಗಳೂರು: ಹಣ, ಜಾತಿ, ಕುಟುಂಬದ ರಾಜಕೀಯ ಹಿನ್ನೆಲೆಯುಳ್ಳ ಕೆಲವರು ಈ ಹಿಂದೆ ಪ್ರಧಾನಿಯಾಗಿದ್ದಾರೆ. ಆದರೆ, ತಮ್ಮ ಶ್ರಮದಿಂದ ಪ್ರಧಾನಿ ಹುದ್ದೇಗೇರಿದವರು ನರೇಂದ್ರ ಮೋದಿ’ ಎಂದು ಶಾಸಕ ಸಿ.ಟಿ.ರವಿ ಹೇಳಿದರು.

ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ರಾಷ್ಟ್ರಧರ್ಮ ಆಯೋಜಿಸಿದ್ದ “ಮೋದಿ ಮತ್ತೊಮ್ಮೆ” ವಿಡಿಯೋ ಹಾಡಿನ್ನು ಬಿಡುಗಡೆಗೊಳಿಸಿ ಮಾತನಾಡಿ, ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿ  ನರೇಂದ್ರ ಮೋದಿ. ಜಾತಿ, ಹಣ ಹಾಗೂ ಕುಟುಂಬದ ರಾಜಕೀಯ ಹಿನ್ನಲೆ ಇಲ್ಲದೆ ತಮ್ಮ ಶ್ರಮದಿಂದ ಪ್ರಧಾನಿ ಹುದ್ದೇಗೇರಿದವರು ನರೇಂದ್ರ ಮೋದಿ ಎಂದರು.

‘ಅದೃಷ್ಟದ ಮೂಲಕ ಅಧಿಕಾರಕ್ಕೆ ಏರಿದರು ಮನಮೋಹನ್ ಸಿಂಗ್. ಆದರೆ, ಆಡಳಿತ ನಡೆಸಿದ್ದು ಮಾತ್ರ ಸೋನಿಯಾ ಗಾಂಧಿ. ಸಚಿವ ಸಂಪುಟಕ್ಕೆ ಕಿಮ್ಮತ್ತು ನೀಡದಂತಹ ಸ್ಥಿತಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿತ್ತು. ಆದರೆ, ಸಂಪುಟವನ್ನು ಪ್ರಜಾಪ್ರಭುತ್ವದ ದೇಗುಲ ಎಂದು ಕರೆದವರು ಮೋದಿ’ ಎಂದು ಹೇಳಿದರು.

ದೇಶದ ಅಭಿವೃದ್ದಿಯ ಬಗ್ಗೆ ತಮ್ಮದೇ ಆದ ವಿಶಿಷ್ಟ ಕನಸನ್ನುಹೊಂದಿರುವ ಪ್ರಧಾನಿ ಪ್ರಾಮಾಣಿಕವಾಗಿ ತಮ್ಮ ಕೆಲಸವನ್ನು ಪ್ರಾರಂಭಿಸಿದರು. ಮೊದಲು ದೇಶದ ಅಭಿವೃದ್ದಿಗೆ ಸುಧಾರಣೆಗಳನ್ನು ಪ್ರಾರಂಭಿಸಿದರು. ನಂತರ ಫಸಲ ಬಿಮಾ ಯೋಜನೆ, ಜನಧನ ಯೋಜನೆ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ನೀಡುವ ಮೂಲಕ ದೇಶದ ಜನಸಾಮಾನ್ಯರ ಅಭಿವೃದ್ದಿಗೆ ಕಾರಣೀಕರ್ತರಾಗಿದ್ದಾರೆ. ಇಂತಹ ಕನಸುಗಳನ್ನು ಹೊಂದಿರುವ ಪ್ರಧಾನಿಯವರು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.

ರಂಗಕರ್ಮಿ ಪ್ರಕಾಶ್ ಬೆಳವಾಡಿ ಮಾತನಾಡಿ, ದೇಶದ ಅಭಿವೃದ್ದಿಗೆ ಮೋದಿ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಮೊದಿಯವರು ಘನತೆಯನ್ನು ಕಾಪಾಡುವ ಕರ್ತವ್ಯ ಬಿಜೆಪಿ ಕಾರ್ಯಕರ್ತರಿಗೆ ಇದೆ. ಅವರ ಕಾರ್ಯಗಳ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸುವ ಅಗತ್ಯ ವಿದೆ. ಕೇಂದ್ರ ಸರಕಾರ ಕಳೆದ 4 ವರ್ಷಗಳಿಂದ ದೇಶದ ಜನಸಾಮಾನ್ಯರ ಅಭಿವೃದ್ದಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದನ್ನು ಜನಸಾಮಾನ್ಯರಿಗೆ ತಲುಪಿಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.

ಮೋದಿ ಮತ್ತೊಮ್ಮೆ ಹಾಡನ್ನು ಚೇತನ್ ನಿರ್ದೇಶಿಸಿದ್ದು, ವಾಗೀಶ್ ಚನ್ನಗಿರಿ ಅವರ ಸಾಹಿತ್ಯವಿದೆ. ದೇಸಿ ಮೋಹನ್ ಮತ್ತು ಪಂಚಮ್ ಜೀವ ಸಂಗೀತ ನಿರ್ದೇಶನ ಮಾಡಿದ್ದಾರೆ. ಅಶೋಕ್ ನಾಡಿಗ್ ನೇತೃತ್ವದಲ್ಲಿ ಛಾಯಾಗ್ರಹಣ ಹಾಗೂ ಸಂಕಲನ ನಡೆದಿದೆ. ಈ ಹಾಡನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ತಲುಪಿಸಬೇಕೆಂಬುದು ತಂಡದ ಉದ್ದೇಶವಾಗಿದೆ.

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

1 hour ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

1 hour ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

2 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

2 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

2 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

2 hours ago