Featured

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಪ್ರಧಾನಿ ಕುರ್ಚಿಯ ಘನತೆ, ಗಾಂಭಿರ್ಯ ಮತ್ತು ಔಚಿತ್ಯವನ್ನು ನರೇಂದ್ರ ಮೋದಿಯವರು ತಮ್ಮ ಸುಳ್ಳು, ಕೀಳು ಅಭಿರುಚಿ, ದ್ವೇಷ, ಅಸೂಯೆಗಳನ್ನು ವ್ಯಕ್ತಪಡಿಸುವ ಭಾಷಣಗಳ ಮೂಲಕ ಮಣ್ಣುಪಾಲು ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಮೇ 10) ಬೆಂಗಳೂರಿನಲ್ಲಿ ಭಾಷಣ ಮಾಡಿ, ಕರ್ನಾಟಕದ ಸಿಎಂ ಇನ್ನೆಷ್ಟು ದಿನ ಅಧಿಕಾರದಲ್ಲಿ ಇರ್ತಾರೋ ಎಂದಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆ ಮೂಲಕ ತಿರುಗೇಟು ಕೊಟ್ಟಿದ್ದಾರೆ. ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ್ದು ದೇಶದ ಪ್ರಧಾನಿಯಾಗಿಯೋ? ಇಲ್ಲವೇ ರಾಜ್ಯ ಬಿಜೆಪಿ ಅಧ್ಯಕ್ಷರೋ? ಇಲ್ಲವೇ ರಾಜ್ಯದ ವಿರೋಧ ಪಕ್ಷದ ನಾಯಕರಾಗಿಯೋ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಿ ಸಾರ್ವಜನಿಕರಲ್ಲಿ ಮೂಡಿರುವ ಗೊಂದಲವನ್ನು ಬಗೆಹರಿಸಬೇಕು ಎಂದು ಟಾಂಗ್‌ ಕೊಟ್ಟಿದ್ದಾರೆ.

ಇದನ್ನೂ ಓದಿ: 

ತನ್ನ ಎಲೆ ಮೇಲೆ ಆನೆ ಸತ್ತು ಬಿದ್ದಿದ್ದರೂ ಎದುರಿನವರ ಎಲೆ ಮೇಲೆ ಸತ್ತು ಬಿದ್ದ ನೊಣವನ್ನು ಹುಡುಕಾಡುವ ಢೋಂಗಿ ಬುದ್ಧಿಯೂ ಅವರ ಭಾಷಣದಲ್ಲಿ ಇತ್ತು. ನೆಹರೂ, ಇಂದಿರಾಗಾಂಧಿ, ವಾಜಪೇಯಿ ಸೇರಿದಂತೆ ದೇಶದ ಪ್ರಧಾನಮಂತ್ರಿಯಾದವರು ಎಂದೂ ಕೆಟ್ಟ ರಾಜಕಾರಣಿಗಳ ರೀತಿ ಬೀದಿ ಭಾಷಣ ಮಾಡಿ ವಿರೋಧ ಪಕ್ಷಗಳನ್ನು ಹಳಿಯಲು ಹೋಗಿಲ್ಲ. ಅವರೆಲ್ಲರೂ ಕಾಪಾಡಿಕೊಂಡು ಬಂದಿದ್ದ ಪ್ರಧಾನಿ ಕುರ್ಚಿಯ ಘನತೆ, ಗಾಂಭಿರ್ಯ ಮತ್ತು ಔಚಿತ್ಯವನ್ನು ನರೇಂದ್ರ ಮೋದಿಯವರು ಮಣ್ಣುಪಾಲು ಮಾಡುತ್ತಿದ್ದಾರೆ. ಬೆಂಗಳೂರಿಗೆ ಬಂದಿದ್ದ ಅವರು ಇನ್ನೂ ಪಂಚ ರಾಜ್ಯಗಳ ಚುನಾವಣಾ ರ‍್ಯಾಲಿಗಳ ಗುಂಗಿನಲ್ಲಿಯೇ ಇದ್ದಂತೆ ಕಂಡರು ಎಂದು ವ್ಯಂಗ್ಯವಾಡಿದ್ದಾರೆ.

Vishwa News 24

Recent Posts

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

12 minutes ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

27 minutes ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

39 minutes ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

44 minutes ago

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…

1 hour ago

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

22 hours ago