ಬೆಂಗಳೂರು: ಮೋದಿ ದೇಶದ ಅತ್ಯಂತ ಭ್ರಷ್ಟ ಪ್ರಧಾನಿ. ದೇಶದ ರಕ್ಷಣೆಗೆ ಹಣವನ್ನೇ ನೀಡುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ಕೇಂದ್ರ ಸರ್ಕಾರ ಕೇವಲ ಬೂಟಾಟಿಕೆಯ ಸರ್ಕಾರ. ಅಚ್ಛೇ ದಿನ್ ಯಾವಾಗ ಬಂದಿದೆ ಹೇಳಿ? ಚೋಕ್ಸಿ, ನೀರವ್ ಮೋದಿ ₹ 60 ಸಾವಿರ ಕೋಟಿ ಲೂಟಿ ಮಾಡಿದ್ದಾರೆ. ಆದರೆ, ಇದ್ಯಾವುದಕ್ಕೂ ಪ್ರಧಾನಿ ಸರಿಯಾಗಿ ಉತ್ತರ ನೀಡಿಲ್ಲ. ಇದರ ವಿರುದ್ಧ ಬೃಹತ್ ಹೊರಾಟ ನಡೆಸುತ್ತೇವೆ ಎಂದರು.
ಇನ್ನು ರಫೆಲ್ ಯುದ್ಧ ವಿಮಾನ ಖರೀದಿಯ ವಿಚಾರದಲ್ಲಿ ಮೋದಿ ಪಲಾಯನ ಮಾಡ್ತಿದ್ದಾರೆ. 108 ಯುದ್ಧ ವಿಮಾನ ಎಚ್ಎಎಲ್ನಲ್ಲಿ ನಿರ್ಮಾಣ ಆಗಬೇಕು. 18 ಯುದ್ಧ ವಿಮಾನ ಫ್ರಾನ್ಸ್ನಿಂದ ಖರೀದಿಸಲು ನಿರ್ಧರಿಸಲಾಗಿತ್ತು. ಪ್ರತಿ ವಿಮಾನಕ್ಕೆ 521 ಕೋಟಿ ನಿಗದಿಯಾಗಿತ್ತು. ಆದ್ರೆ ಯುಪಿಎ ಸರ್ಕಾರದ ಈ ಒಪ್ಪಂದವನ್ನು ಮೋದಿಮುಂದುವರಿಸಲಿಲ್ಲ. ಏಕಾಏಕಿ ಫ್ರ್ಯಾನ್ಸ್ ಜತೆ ಒಪ್ಪಂದ ಮಾಡಿಕೊಂಡಿದ್ದಾರೆ. 126 ಯುದ್ಧ ವಿಮಾನಗಳನ್ನ ಖರೀದಿ ಮಾಡಿದ್ದು ಏಕೆ? ರಫೆಲ್ ಡೀಲ್ ನಡೆಯುವಾಗ ರಕ್ಷಣಾ ಸಚಿವರು ಇರಲಿಲ್ಲ. ಅಲ್ಲಿ ಇದ್ದದ್ದು ಅನಿಲ್ ಅಂಬಾನಿ ಮಾತ್ರ. ಯುಪಿಎ ಇದ್ದಾಗ ಯುದ್ಧ ವಿಮಾನ ದರವನ್ನು ಬಹಿರಂಗಗೊಳಿಸಲಾಗಿತ್ತು. ಆದ್ರೆ ಈಗ ಯುದ್ಧ ವಿಮಾನ ಖರೀದಿ ಡೀಲ್ ಬಹಿರಂಗ ಸಾಧ್ಯವಿಲ್ಲ ಅಂತಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಜಾಹಿರಾತು: vyshali Bar& Family Restaurant kaup:
prop: NAYESH P SHETTY: 9620427036
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]