Featured

ಮೋದಿ ದೇಶದ ಮತ್ತು ಬಿಜೆಪಿಯ ಉನ್ನತ ನಾಯಕ : ಶಿವಸೇನೆ ಮುಖಂಡ ಸಂಜಯ್ ರಾವುತ್ – Vishwanews24

ಮೋದಿ ದೇಶದ ಮತ್ತು ಬಿಜೆಪಿಯ ಉನ್ನತ ನಾಯಕ..

ಬಿಜೆಪಿಯು ಕಳೆದ ಏಳು ವರ್ಷಗಳಲ್ಲಿನ ತನ್ನ ಯಶಸ್ಸನ್ನು ನರೇಂದ್ರ ಮೋದಿಯವರಿಗೆ ಅರ್ಪಿಸಬೇಕು…

 

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಮರು ದಿನವೇ ಶಿವಸೇನೆ ಮುಖಂಡ ಸಂಜಯ್ ರಾವುತ್ ಗುರುವಾರ ‘ಮೋದಿ ದೇಶದ ಮತ್ತು ಬಿಜೆಪಿಯ ಉನ್ನತ ನಾಯಕ’ ಎಂದು ಹೇಳಿರುವುದು ಕುತೂಹಲ ಮೂಡಿಸಿದೆ.

ಮೋದಿ ಜನಪ್ರಿಯತೆಯು ಕುಸಿಯುತ್ತಿದೆ ಎಂದು ಭಾವಿಸಿ ಆರ್‌ಎಸ್‌ಎಸ್‌ ರಾಜ್ಯ ಚುನಾವಣೆಗಳಲ್ಲಿ ರಾಜ್ಯದ ನಾಯಕರನ್ನು ಮುಂದಿಟ್ಟುಕೊಂಡು ಹೋಗುತ್ತಿದೆ ಎನ್ನುವ ಮಾಧ್ಯಮ ವರದಿಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ರಾವುತ್‌ ಈ ಪ್ರತಿಕ್ರಿಯೆ ನೀಡಿದರು.

ಉತ್ತರ ಮಹಾರಾಷ್ಟ್ರದ ಪ್ರವಾಸದಲ್ಲಿರುವ ರಾವುತ್‌ ಜಲ್ಗಾಂವ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಮಾಧ್ಯಮ ವರದಿಗಳನ್ನೂ ನಂಬುವುದಿಲ್ಲ. ನಾನು ಈ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಯಾವುದೇ ಅಧಿಕೃತ ಹೇಳಿಕೆಯನ್ನೂ ನೀಡಲಾರೆ. ಬಿಜೆಪಿಯು ಕಳೆದ ಏಳು ವರ್ಷಗಳಲ್ಲಿನ ತನ್ನ ಯಶಸ್ಸನ್ನು ನರೇಂದ್ರ ಮೋದಿಯವರಿಗೆ ಅರ್ಪಿಸಬೇಕು. ಪ್ರಸ್ತುತ ಮೋದಿ ಅವರು ದೇಶದಲ್ಲಿ ಮತ್ತು ಬಿಜೆಪಿಯಲ್ಲಿ ಉನ್ನತ ನಾಯಕರಾಗಿದ್ದಾರೆ’ ಎಂದು ಅವರು ಹೇಳಿದ್ದಾರೆ.

‘ಶಿವಸೇನಾ ನಿಲುವು ಯಾವಾಗಲೂ ಒಂದೇ, ಪ್ರಧಾನಿ ಇಡೀ ದೇಶಕ್ಕೆ ಸೇರಿದವರೇ ಹೊರತು ನಿರ್ದಿಷ್ಟ ಪಕ್ಷಕ್ಕೆ ಸೇರಿದವರಲ್ಲ. ಆಡಳಿತ ಯಂತ್ರದ ಮೇಲೆ ಒತ್ತಡ ಉಂಟಾಗುವುದರಿಂದ ಪ್ರಧಾನಿ ಚುನಾವಣಾ ಪ್ರಚಾರದಲ್ಲಿ ತೊಡಗಬಾರದು’ ಎಂದು ಹೇಳಿದರು.

ಮೋದಿ ಬಯಸಿದಲ್ಲಿ ತಮ್ಮ ಪಕ್ಷವು ಹುಲಿಯೊಂದಿಗೆ (ಶಿವಸೇನೆಯ ಚಿಹ್ನೆ) ಸ್ನೇಹ ಮಾಡಲಿದೆ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ರಾವುತ್‌, ‘ಹುಲಿಯೊಂದಿಗೆ ಯಾರೂ ಸ್ನೇಹ ಬೆಳೆಸಲು ಸಾಧ್ಯವಿಲ್ಲ. ತನ್ನೊಂದಿಗೆ ಯಾರು ಸ್ನೇಹ ಬೆಳೆಸಬೇಕೆನ್ನುವುದನ್ನು ಹುಲಿ ನಿರ್ಧರಿಸುತ್ತದೆ’ ಎಂದರು.

ಉತ್ತರ ಮಹಾರಾಷ್ಟ್ರದ ಪ್ರವಾಸದ ಬಗ್ಗೆ ಕೇಳಿದಾಗ, ‘ಇದು ಸಂಘಟನೆ ಬಲಪಡಿಸುವ ಪಕ್ಷದ ಪ್ರಯತ್ನಗಳ ಭಾಗವಾಗಿದೆ. ಮಹಾ ವಿಕಾಸ್ ಅಘಾಡಿ (ಎಂವಿಎ) ಮಿತ್ರಪಕ್ಷಗಳು ತಮ್ಮ ನೆಲೆ ವಿಸ್ತರಿಸಲು ಮತ್ತು ಪಕ್ಷಗಳನ್ನು ಬಲಪಡಿಸುವ ಹಕ್ಕನ್ನು ಹೊಂದಿವೆ. ಇದು ಈ ಸಮಯದ ಅವಶ್ಯಕತೆ ಕೂಡ ಹೌದು. ಪರಸ್ಪರ ಸಮನ್ವಯ ಬಲಪಡಿಸುವ ಕುರಿತು ನಾವು ಸಭೆಗಳನ್ನು ನಡೆಸುತ್ತಿದ್ದೇವೆ’ ಎಂದು ರಾವುತ್‌ ಹೇಳಿದರು.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

3 minutes ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

2 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

2 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago