ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು 71ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.
ಮಾಜಿ ದೇವೇಗೌಡರು, 71ನೇ ಹುಟ್ಟುಹಬ್ಬದ ಶುಭಾಶಯಗಳು. ನರೇಂದ್ರ ಮೋದಿಯವರಿಗೆ ಉತ್ತಮ ಆರೋಗ್ಯವನ್ನು ಕರುಣಿಸಲಿ ಎಂದು ನಾನು ಸರ್ವಶಕ್ತ ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರ ನಾಯಕತ್ವದಲ್ಲಿ ಮಹಾನ್ ರಾಷ್ಟ್ರವು ಎಲ್ಲಾ ನಾಗರಿಕರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ತರಲಿ ಎಂದು ಟ್ವೀಟ್ ಮಾಡಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ, ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭಾಶಯಗಳು. ರಾಷ್ಟ್ರದ ಸೇವೆ ಮಾಡಲು ಅವರಿಗೆ ಹೆಚ್ಚಿನ ಶಕ್ತಿ, ಸ್ಫೂರ್ತಿ ಮತ್ತು ಆರೋಗ್ಯವನ್ನು ಕರುಣಿಸಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ಸೇವೆ ಮತ್ತು ಸಮರ್ಪಣಾ ಅಭಿಯಾನವನ್ನು ಆಯೋಜಿಸಿದೆ. ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಸೆ.17ರಿಂದ ಅ.7ರ ವರೆಗೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ 30ಲಕ್ಷ ಜನರಿಗೆ ಲಸಿಕೆ ಹಾಕಿಸುವ ಸಂಕಲ್ಪ ಮಾಡಲಾಗಿದೆ. ಕರ್ನಾಟಕದ ಕಾವೇರಿ, ಮಲಪ್ರಭಾ, ಕೃಷ್ಣಾ ನದಿ ಸೇರಿ ಭಾರತದ ಎಲ್ಲ 71 ನದಿಗಳ ಸ್ವಚ್ಛತಾ ಕಾರ್ಯ ನಡೆಸಲು ಬಿಜೆಪಿ ಮುಂದಾಗಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]