ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು 71ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.
ಮಾಜಿ ದೇವೇಗೌಡರು, 71ನೇ ಹುಟ್ಟುಹಬ್ಬದ ಶುಭಾಶಯಗಳು. ನರೇಂದ್ರ ಮೋದಿಯವರಿಗೆ ಉತ್ತಮ ಆರೋಗ್ಯವನ್ನು ಕರುಣಿಸಲಿ ಎಂದು ನಾನು ಸರ್ವಶಕ್ತ ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರ ನಾಯಕತ್ವದಲ್ಲಿ ಮಹಾನ್ ರಾಷ್ಟ್ರವು ಎಲ್ಲಾ ನಾಗರಿಕರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ತರಲಿ ಎಂದು ಟ್ವೀಟ್ ಮಾಡಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ, ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭಾಶಯಗಳು. ರಾಷ್ಟ್ರದ ಸೇವೆ ಮಾಡಲು ಅವರಿಗೆ ಹೆಚ್ಚಿನ ಶಕ್ತಿ, ಸ್ಫೂರ್ತಿ ಮತ್ತು ಆರೋಗ್ಯವನ್ನು ಕರುಣಿಸಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ಸೇವೆ ಮತ್ತು ಸಮರ್ಪಣಾ ಅಭಿಯಾನವನ್ನು ಆಯೋಜಿಸಿದೆ. ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಸೆ.17ರಿಂದ ಅ.7ರ ವರೆಗೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ 30ಲಕ್ಷ ಜನರಿಗೆ ಲಸಿಕೆ ಹಾಕಿಸುವ ಸಂಕಲ್ಪ ಮಾಡಲಾಗಿದೆ. ಕರ್ನಾಟಕದ ಕಾವೇರಿ, ಮಲಪ್ರಭಾ, ಕೃಷ್ಣಾ ನದಿ ಸೇರಿ ಭಾರತದ ಎಲ್ಲ 71 ನದಿಗಳ ಸ್ವಚ್ಛತಾ ಕಾರ್ಯ ನಡೆಸಲು ಬಿಜೆಪಿ ಮುಂದಾಗಿದೆ.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…