ದೇಶ

ಮೋದಿ ನಿಲುವಿಗೆ ಕಂಗೆಟ್ಟ ಟ್ರಂಪ್ …

ಹೊಸದಿಲ್ಲಿ: ಅಮೆರಿಕದ ಟ್ಯಾರಿಫ್ ಟ್ರೇಡ್‌ ವಾರ್‌ ನೊಳಗೆ ಕಾಲಿಟ್ಟಿರುವ ಭಾರತ ಕೂಡ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಲು ತೀರ್ಮಾನಿಸಿದೆ. ಈ ಮೂಲಕ ಅಮೆರಿಕದ ಉದ್ಧಟತನಕ್ಕೆ ಭಾರತ ಸರಿಯಾಗಿ ತಿರುಗೇಟು ನೀಡಿದೆ. ಒಟ್ಟು 29 ಉತ್ಪನ್ನಗಳ ಕಸ್ಟಮ್ಸ್ ಸುಂಕ ಹೆಚ್ಚಳ ಮಾಡಲು ಭಾರತ ಸರಕಾರ ನಿರ್ಧರಿಸಿದೆ. ಆ ಪೈಕಿ 28 ಸರಕುಗಳ ಮೇಲಿನ ಹೆಚ್ಚುವರಿ ತೆರಿಗೆ ತತ್‌ಕ್ಷಣಕ್ಕೆ ಜಾರಿಗೆ ಬಂದರೆ ಸಿಗಡಿ ಮೀನಿನ ಮೇಲಿನ ತೆರಿಗೆ ಹೇರಿಕೆ ಆ. 4ರಿಂದ ಜಾರಿಗೆ ಬರಲಿದೆ. ಅಮೆರಿಕದಿಂದ ಆಮ ದಾಗುತ್ತಿರುವ ಬಹಳಷ್ಟು ಕೃಷಿ ಮತ್ತು ಸ್ಟೀಲ್ ಉತ್ಪನ್ನಗಳ ದರ ಹೆಚ್ಚಾಗಲಿದೆ.

ಅಂದರೆ, ಬೋರಿಕ್ ಆ್ಯಸಿಡ್, ಅವರೆ (ಲೆಂಟಿಲ್) ಸಹಿತ 30 ವಸ್ತುಗಳ ಪಟ್ಟಿಯನ್ನು ವಿಶ್ವ ವ್ಯಾಪಾರ ಸಂಸ್ಥೆಗೆ ಕಳುಹಿಸಿಕೊಟ್ಟಿದೆ. ಯಾವ ಪದಾರ್ಥಕ್ಕೆ ಎಷ್ಟು ತೆರಿಗೆ ಹಾಕುತ್ತೇವೆ ಎಂದು ಈ ಪಟ್ಟಿಯಲ್ಲಿ ಮಾಹಿತಿ ನೀಡಲಾಗಿದ್ದು, ಈ ಸಂಬಂಧ ಅಧಿಸೂಚನೆಯನ್ನೂ ಹೊರಡಿಸಲಾಗಿದೆ. ಸಿಗಡಿ ಮೇಲಿನ ತೆರಿಗೆಯನ್ನು ಶೇ.30ಕ್ಕೇರಿಸಲಾಗಿದ್ದರೆ, ಕಡಲೆ, ಕಡಲೆ ಬೇಳೆ, ತೊಗರಿ ಬೇಳೆಯ ಮೇಲಿನ ತೆರಿಗೆ ಶೇ.70ಕ್ಕೆ ಏರಿಸಲಾಗಿದೆ. ಇದರ ಜತೆಯಲ್ಲಿ ಸೇಬು, ಬಾದಾಮಿ ಮೇಲೂ ಹೆಚ್ಚುವರಿ ತೆರಿಗೆ ವಿಧಿಸಲಾಗಿದೆ.

ಅಮೆರಿಕ ಉಕ್ಕು ಮತ್ತು ಅಲ್ಯುಮಿನಿಯಂ ಮೇಲೆ ದರ ಏರಿಕೆ ಮಾಡಿದ್ದನ್ನು ವಿರೋಧಿಸಿ ಈಗಾಗಲೇ ವಿಶ್ವ ವ್ಯಾಪಾರ ಸಂಸ್ಥೆಗೆ ದೂರು ನೀಡಿರುವ ಭಾರತ, ತಾನೂ ಅಮೆರಿಕದಿಂದ ಆಮದಾಗುವ ನಟ್, ಬೋಲ್ಟ್, ಸ್ಕ್ರ್ಯು ಸಹಿತ ಹಲವಾರು ವಸ್ತುಗಳ ಮೇಲೆ ಇನ್ನಷ್ಟು ಆಮದು ಸುಂಕ ವಿಧಿಸಿದೆ.ಅಮೆರಿಕವು ತಾನು ಆಮದು ಮಾಡಿಕೊಳ್ಳುತ್ತಿರುವ ಸರಕುಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುವ ಮೂಲಕ ಈ ವ್ಯಾಪಾರ ಸಮರಕ್ಕೆ ನಾಂದಿ ಹಾಡಿತ್ತು. ತದನಂತರ ಐರೋಪ್ಯ ಒಕ್ಕೂಟ ಹಾಗೂ ಚೀನ ಕೂಡ ತಿರುಗೇಟು ನೀಡಿ ಅಮೆರಿಕದ ಉತ್ಪನ್ನಗಳಿಗೆ ಆಮದು ಸುಂಕ ಹೆಚ್ಚಳ ಮಾಡಿದ್ದವು.

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

4 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

4 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

24 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago