ದೇಶ

ಮೋದಿ ನಿಲುವಿಗೆ ಕಂಗೆಟ್ಟ ಟ್ರಂಪ್ …

ಹೊಸದಿಲ್ಲಿ: ಅಮೆರಿಕದ ಟ್ಯಾರಿಫ್ ಟ್ರೇಡ್‌ ವಾರ್‌ ನೊಳಗೆ ಕಾಲಿಟ್ಟಿರುವ ಭಾರತ ಕೂಡ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಲು ತೀರ್ಮಾನಿಸಿದೆ. ಈ ಮೂಲಕ ಅಮೆರಿಕದ ಉದ್ಧಟತನಕ್ಕೆ ಭಾರತ ಸರಿಯಾಗಿ ತಿರುಗೇಟು ನೀಡಿದೆ. ಒಟ್ಟು 29 ಉತ್ಪನ್ನಗಳ ಕಸ್ಟಮ್ಸ್ ಸುಂಕ ಹೆಚ್ಚಳ ಮಾಡಲು ಭಾರತ ಸರಕಾರ ನಿರ್ಧರಿಸಿದೆ. ಆ ಪೈಕಿ 28 ಸರಕುಗಳ ಮೇಲಿನ ಹೆಚ್ಚುವರಿ ತೆರಿಗೆ ತತ್‌ಕ್ಷಣಕ್ಕೆ ಜಾರಿಗೆ ಬಂದರೆ ಸಿಗಡಿ ಮೀನಿನ ಮೇಲಿನ ತೆರಿಗೆ ಹೇರಿಕೆ ಆ. 4ರಿಂದ ಜಾರಿಗೆ ಬರಲಿದೆ. ಅಮೆರಿಕದಿಂದ ಆಮ ದಾಗುತ್ತಿರುವ ಬಹಳಷ್ಟು ಕೃಷಿ ಮತ್ತು ಸ್ಟೀಲ್ ಉತ್ಪನ್ನಗಳ ದರ ಹೆಚ್ಚಾಗಲಿದೆ.

ಅಂದರೆ, ಬೋರಿಕ್ ಆ್ಯಸಿಡ್, ಅವರೆ (ಲೆಂಟಿಲ್) ಸಹಿತ 30 ವಸ್ತುಗಳ ಪಟ್ಟಿಯನ್ನು ವಿಶ್ವ ವ್ಯಾಪಾರ ಸಂಸ್ಥೆಗೆ ಕಳುಹಿಸಿಕೊಟ್ಟಿದೆ. ಯಾವ ಪದಾರ್ಥಕ್ಕೆ ಎಷ್ಟು ತೆರಿಗೆ ಹಾಕುತ್ತೇವೆ ಎಂದು ಈ ಪಟ್ಟಿಯಲ್ಲಿ ಮಾಹಿತಿ ನೀಡಲಾಗಿದ್ದು, ಈ ಸಂಬಂಧ ಅಧಿಸೂಚನೆಯನ್ನೂ ಹೊರಡಿಸಲಾಗಿದೆ. ಸಿಗಡಿ ಮೇಲಿನ ತೆರಿಗೆಯನ್ನು ಶೇ.30ಕ್ಕೇರಿಸಲಾಗಿದ್ದರೆ, ಕಡಲೆ, ಕಡಲೆ ಬೇಳೆ, ತೊಗರಿ ಬೇಳೆಯ ಮೇಲಿನ ತೆರಿಗೆ ಶೇ.70ಕ್ಕೆ ಏರಿಸಲಾಗಿದೆ. ಇದರ ಜತೆಯಲ್ಲಿ ಸೇಬು, ಬಾದಾಮಿ ಮೇಲೂ ಹೆಚ್ಚುವರಿ ತೆರಿಗೆ ವಿಧಿಸಲಾಗಿದೆ.

ಅಮೆರಿಕ ಉಕ್ಕು ಮತ್ತು ಅಲ್ಯುಮಿನಿಯಂ ಮೇಲೆ ದರ ಏರಿಕೆ ಮಾಡಿದ್ದನ್ನು ವಿರೋಧಿಸಿ ಈಗಾಗಲೇ ವಿಶ್ವ ವ್ಯಾಪಾರ ಸಂಸ್ಥೆಗೆ ದೂರು ನೀಡಿರುವ ಭಾರತ, ತಾನೂ ಅಮೆರಿಕದಿಂದ ಆಮದಾಗುವ ನಟ್, ಬೋಲ್ಟ್, ಸ್ಕ್ರ್ಯು ಸಹಿತ ಹಲವಾರು ವಸ್ತುಗಳ ಮೇಲೆ ಇನ್ನಷ್ಟು ಆಮದು ಸುಂಕ ವಿಧಿಸಿದೆ.ಅಮೆರಿಕವು ತಾನು ಆಮದು ಮಾಡಿಕೊಳ್ಳುತ್ತಿರುವ ಸರಕುಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುವ ಮೂಲಕ ಈ ವ್ಯಾಪಾರ ಸಮರಕ್ಕೆ ನಾಂದಿ ಹಾಡಿತ್ತು. ತದನಂತರ ಐರೋಪ್ಯ ಒಕ್ಕೂಟ ಹಾಗೂ ಚೀನ ಕೂಡ ತಿರುಗೇಟು ನೀಡಿ ಅಮೆರಿಕದ ಉತ್ಪನ್ನಗಳಿಗೆ ಆಮದು ಸುಂಕ ಹೆಚ್ಚಳ ಮಾಡಿದ್ದವು.

 

Vishwa News 24

Recent Posts

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

27 minutes ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

38 minutes ago

ದ್ವೇಷ ಭಾಷಣ ಮಾಡಿರುವ ಸಿ.ಟಿ.ರವಿಯನ್ನು ಕೂಡಲೇ ಬಂಧಿಸಿ: ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಆಗ್ರಹ – vishwanews24

ದ್ವೇಷ ಭಾಷಣ ಮಾಡಿರುವ ಸಿ.ಟಿ.ರವಿಯನ್ನು ಕೂಡಲೇ ಬಂಧಿಸಿ: ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಆಗ್ರಹ ಮಂಗಳೂರು: ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದನ್ನೇ ರಾಜಕೀಯ…

54 minutes ago

ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಸಿ.ಟಿ.ರವಿ ವಿರುದ್ಧ FIR – vishwanews24

ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಸಿ.ಟಿ.ರವಿ ವಿರುದ್ಧ FIR ಚಿಕ್ಕಮಗಳೂರು: ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ…

58 minutes ago

‘ಬಿಪಿಎಲ್ ಪಡಿತರ ಚೀಟಿ’ ಆದಾಯ ಮಿತಿ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ : ಸಚಿವ ಕೆ.ಎಚ್.ಮುನಿಯಪ್ಪ – vishwanews24

BPL ಕಾರ್ಡ್‌ ಕುರಿತು ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ    ಆದಾಯ ಮಿತಿ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ…

1 hour ago

ಬೆಳ್ತಂಗಡಿ:  ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ; ಅದೃಷ್ಟವಶಾತ್ ಸವಾರ ಅಪಾಯದಿಂದ ಪಾರು – vishwanews24

ಬೆಳ್ತಂಗಡಿ:  ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ; ಅದೃಷ್ಟವಶಾತ್ ಸವಾರ ಅಪಾಯದಿಂದ ಪಾರು ಬೆಳ್ತಂಗಡಿ,: ಭಾರೀ ಮಳೆ ಹಾಗೂ…

1 hour ago