ನವದೆಹಲಿ: ಮೋದಿ ಪ್ರಧಾನಿಯಾಗಿರುವವರೆಗೆ ಯಾವ ಕಾರ್ಪೊರೇಟ್ ಕಂಪನಿಯೂ ರೈತರ ಜಮೀನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.
ಕಿಸಾನ್ಗಡ ಗ್ರಾಮದ ರೈತರನ್ನು ಉದ್ದೇಶಿಸಿ ಇಲ್ಲಿ ಮಾತನಾಡಿದ ಅವರು, ‘ನೂತನ ಕೃಷಿ ಕಾಯ್ದೆಗಳು ಜಾರಿಯಾದರೂ ಬೆಂಬಲ ಬೆಲೆ ಮುಂದುವರಿಯಲಿದ್ದು, ಮಂಡಿಗಳು ಸಹ ಕಾರ್ಯ ನಿರ್ವಹಿಸಲಿವೆ’ ಎಂದು ಹೇಳಿದರು.
‘ನೂತನ ಕೃಷಿ ಕಾಯ್ದೆಗಳು ರೈತರ ಹಿತವನ್ನು ಕಾಪಾಡುವುದಿಲ್ಲ, ಅವುಗಳು ರೈತ ವಿರೋಧಿ ಎಂಬ ಅನುಮಾನಗಳು ಇದ್ದರೆ, ಈ ಎಲ್ಲ ಸಂದೇಹಗಳ ನಿವಾರಣೆಗಾಗಿ ರೈತರೊಂದಿಗೆ ತೆರೆದ ಮನಸ್ಸಿನಿಂದ ಚರ್ಚೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ’ ಎಂದೂ ಹೇಳಿದರು.
‘ಬೆಂಬಲ ಬೆಲೆ ಸೇರಿದಂತೆ ನೂತನ ಕಾಯ್ದೆಗಳಲ್ಲಿ ಅಡಕವಾಗಿರುವ ಅಂಶಗಳ ಬಗ್ಗೆ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ಸುಳ್ಳು ಹೇಳುತ್ತಿವೆ. ರೈತರ ಅಭಿವೃದ್ಧಿಯೇ ಮೋದಿ ನೇತೃತ್ವದ ಸರ್ಕಾರದ ಆದ್ಯತೆಯಾಗಿದೆ’ ಎಂದು ಹೇಳುವ ಮೂಲಕ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡರು.
ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…
ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…
ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…
ಉಡುಪಿ : ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಬಸ್ ಕಂಡಕ್ಟರ್ ಬಂಧನ ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ…