Featured

ಮೋದಿ ಬಿಟ್ಟರೆ ಯಾರಿಗೂ ಈ ದೇಶದ ಪ್ರಧಾನಿಯಾಗುವ ಯೋಗ್ಯತೆ ಇಲ್ಲ : ಎಚ್.ಡಿ. ದೇವೇಗೌಡ – Vishwanews24

ಮೋದಿ ಬಿಟ್ಟರೆ ಯಾರಿಗೂ ಈ ದೇಶದ ಪ್ರಧಾನಿಯಾಗುವ ಯೋಗ್ಯತೆ ಇಲ್ಲ : ಎಚ್.ಡಿ. ದೇವೇಗೌಡ

ಹಾರೋಹಳ್ಳಿ: ಮೋದಿ ಬಿಟ್ಟರೆ ಯಾರಿಗೂ ಈ ದೇಶದ ಪ್ರಧಾನಿಯಾಗುವ ಯೋಗ್ಯತೆ ಇಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.

ಅವರು ಮರಳವಾಡಿಯಲ್ಲಿ ಬಿಜೆಪಿ ಅಭ್ಯರ್ಥಿ, ತಮ್ಮ ಅಳಿಯ ಸಿ.ಎನ್. ಮಂಜುನಾಥ್ ಪರವಾಗಿ ಇಂದು ಮತಯಾಚನೆ ನಡೆಸಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಅವರಿಗೆ (ಡಿ.ಕೆ ಸಹೋದರರಿಗೆ) ಸೆಡ್ಡು ಹೊಡೆಯಬೇಕು. ಯಾರಿಗೂ ಹೆದರಬೇಡಿ. ಅವರ ಹೆಸರು ಹೇಳುವುದಿಲ್ಲ.

ಈ ಸಲ ಅವರ ಅಂತ್ಯ ಆಗಲೇಬೇಕು ಎಂಬ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಒತ್ತಾಯದ ಮೇರೆಗೆ ಡಾ. ಮಂಜುನಾಥ್ ಅವರನ್ನು ಚುನಾವಣೆಗೆ ನಿಲ್ಲಿಸಿದ್ದೇವೆ. ಹಾಗಾಗಿ, ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಕುಮಾರಸ್ವಾಮಿ ಅವರು ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ರಚನೆ ಮಾಡಿ ಕೊಡುಗೆ ನೀಡಿದ್ದಾರೆ. ದೇಶದಲ್ಲಿ ₹25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ ಏಕೈಕ ಮುಖ್ಯಮಂತ್ರಿ ಅಂದರೆ ಅದು ಕುಮಾರಸ್ವಾಮಿ. ಮೋದಿ ಅವರು, ಮಂಡ್ಯಡಲ್ಲಿ ಕುಮಾರಸ್ವಾಮಿಯನ್ನು ನಿಲ್ಲಿಸಲು ಹೇಳಿದರು. ಕೇಂದ್ರದಲ್ಲಿ ಅವರ ಸೇವೆ ಬಳಸಿಕೊಳ್ಳಲು ಅಲ್ಲಿ ಅವರನ್ನು ನಿಲ್ಲಿಸಲಾಗಿದೆ ಎಂದರು.

ಡಾ. ಮಂಜುನಾಥ್ 8 ಲಕ್ಷ ಜನರಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಅವರ ಸೇವೆಯನ್ನು ಮೋದಿ ಮತ್ತು ಅಮಿತ್ ಶಾ ಅವರು ರಾಷ್ಟ್ರಮಟ್ಟದಲ್ಲಿ ಬಳಸಿಕೊಳ್ಳುವುದಕ್ಕಾಗಿ, ಅವರನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಚುನಾವಣೆಗೆ ನಿಲ್ಲಿಸಲು ಒಪ್ಪಿಸಿದರು. ಜನಸೇವೆ ಮಾಡಿ ಮನೆ‌ ಮಾತಾಗಿರುವ ಪ್ರಾಮಾಣಿಕ ಮಂಜುನಾಥ್ ಅವರಿಗೆ ಜನ ಮತ ನೀಡಬೇಕು ಎಂದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago