Featured

ಮೋದಿ ಬಿಟ್ಟರೆ ಯಾರಿಗೂ ಈ ದೇಶದ ಪ್ರಧಾನಿಯಾಗುವ ಯೋಗ್ಯತೆ ಇಲ್ಲ : ಎಚ್.ಡಿ. ದೇವೇಗೌಡ – Vishwanews24

ಮೋದಿ ಬಿಟ್ಟರೆ ಯಾರಿಗೂ ಈ ದೇಶದ ಪ್ರಧಾನಿಯಾಗುವ ಯೋಗ್ಯತೆ ಇಲ್ಲ : ಎಚ್.ಡಿ. ದೇವೇಗೌಡ

ಹಾರೋಹಳ್ಳಿ: ಮೋದಿ ಬಿಟ್ಟರೆ ಯಾರಿಗೂ ಈ ದೇಶದ ಪ್ರಧಾನಿಯಾಗುವ ಯೋಗ್ಯತೆ ಇಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.

ಅವರು ಮರಳವಾಡಿಯಲ್ಲಿ ಬಿಜೆಪಿ ಅಭ್ಯರ್ಥಿ, ತಮ್ಮ ಅಳಿಯ ಸಿ.ಎನ್. ಮಂಜುನಾಥ್ ಪರವಾಗಿ ಇಂದು ಮತಯಾಚನೆ ನಡೆಸಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಅವರಿಗೆ (ಡಿ.ಕೆ ಸಹೋದರರಿಗೆ) ಸೆಡ್ಡು ಹೊಡೆಯಬೇಕು. ಯಾರಿಗೂ ಹೆದರಬೇಡಿ. ಅವರ ಹೆಸರು ಹೇಳುವುದಿಲ್ಲ.

ಈ ಸಲ ಅವರ ಅಂತ್ಯ ಆಗಲೇಬೇಕು ಎಂಬ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಒತ್ತಾಯದ ಮೇರೆಗೆ ಡಾ. ಮಂಜುನಾಥ್ ಅವರನ್ನು ಚುನಾವಣೆಗೆ ನಿಲ್ಲಿಸಿದ್ದೇವೆ. ಹಾಗಾಗಿ, ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಕುಮಾರಸ್ವಾಮಿ ಅವರು ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ರಚನೆ ಮಾಡಿ ಕೊಡುಗೆ ನೀಡಿದ್ದಾರೆ. ದೇಶದಲ್ಲಿ ₹25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ ಏಕೈಕ ಮುಖ್ಯಮಂತ್ರಿ ಅಂದರೆ ಅದು ಕುಮಾರಸ್ವಾಮಿ. ಮೋದಿ ಅವರು, ಮಂಡ್ಯಡಲ್ಲಿ ಕುಮಾರಸ್ವಾಮಿಯನ್ನು ನಿಲ್ಲಿಸಲು ಹೇಳಿದರು. ಕೇಂದ್ರದಲ್ಲಿ ಅವರ ಸೇವೆ ಬಳಸಿಕೊಳ್ಳಲು ಅಲ್ಲಿ ಅವರನ್ನು ನಿಲ್ಲಿಸಲಾಗಿದೆ ಎಂದರು.

ಡಾ. ಮಂಜುನಾಥ್ 8 ಲಕ್ಷ ಜನರಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಅವರ ಸೇವೆಯನ್ನು ಮೋದಿ ಮತ್ತು ಅಮಿತ್ ಶಾ ಅವರು ರಾಷ್ಟ್ರಮಟ್ಟದಲ್ಲಿ ಬಳಸಿಕೊಳ್ಳುವುದಕ್ಕಾಗಿ, ಅವರನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಚುನಾವಣೆಗೆ ನಿಲ್ಲಿಸಲು ಒಪ್ಪಿಸಿದರು. ಜನಸೇವೆ ಮಾಡಿ ಮನೆ‌ ಮಾತಾಗಿರುವ ಪ್ರಾಮಾಣಿಕ ಮಂಜುನಾಥ್ ಅವರಿಗೆ ಜನ ಮತ ನೀಡಬೇಕು ಎಂದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

23 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

23 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

23 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

24 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

24 hours ago