Featured

ಮೋದಿ ಬಿಟ್ಟರೆ ಯಾರಿಗೂ ಈ ದೇಶದ ಪ್ರಧಾನಿಯಾಗುವ ಯೋಗ್ಯತೆ ಇಲ್ಲ : ಎಚ್.ಡಿ. ದೇವೇಗೌಡ – Vishwanews24

ಮೋದಿ ಬಿಟ್ಟರೆ ಯಾರಿಗೂ ಈ ದೇಶದ ಪ್ರಧಾನಿಯಾಗುವ ಯೋಗ್ಯತೆ ಇಲ್ಲ : ಎಚ್.ಡಿ. ದೇವೇಗೌಡ

ಹಾರೋಹಳ್ಳಿ: ಮೋದಿ ಬಿಟ್ಟರೆ ಯಾರಿಗೂ ಈ ದೇಶದ ಪ್ರಧಾನಿಯಾಗುವ ಯೋಗ್ಯತೆ ಇಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.

ಅವರು ಮರಳವಾಡಿಯಲ್ಲಿ ಬಿಜೆಪಿ ಅಭ್ಯರ್ಥಿ, ತಮ್ಮ ಅಳಿಯ ಸಿ.ಎನ್. ಮಂಜುನಾಥ್ ಪರವಾಗಿ ಇಂದು ಮತಯಾಚನೆ ನಡೆಸಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಅವರಿಗೆ (ಡಿ.ಕೆ ಸಹೋದರರಿಗೆ) ಸೆಡ್ಡು ಹೊಡೆಯಬೇಕು. ಯಾರಿಗೂ ಹೆದರಬೇಡಿ. ಅವರ ಹೆಸರು ಹೇಳುವುದಿಲ್ಲ.

ಈ ಸಲ ಅವರ ಅಂತ್ಯ ಆಗಲೇಬೇಕು ಎಂಬ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಒತ್ತಾಯದ ಮೇರೆಗೆ ಡಾ. ಮಂಜುನಾಥ್ ಅವರನ್ನು ಚುನಾವಣೆಗೆ ನಿಲ್ಲಿಸಿದ್ದೇವೆ. ಹಾಗಾಗಿ, ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಕುಮಾರಸ್ವಾಮಿ ಅವರು ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ರಚನೆ ಮಾಡಿ ಕೊಡುಗೆ ನೀಡಿದ್ದಾರೆ. ದೇಶದಲ್ಲಿ ₹25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ ಏಕೈಕ ಮುಖ್ಯಮಂತ್ರಿ ಅಂದರೆ ಅದು ಕುಮಾರಸ್ವಾಮಿ. ಮೋದಿ ಅವರು, ಮಂಡ್ಯಡಲ್ಲಿ ಕುಮಾರಸ್ವಾಮಿಯನ್ನು ನಿಲ್ಲಿಸಲು ಹೇಳಿದರು. ಕೇಂದ್ರದಲ್ಲಿ ಅವರ ಸೇವೆ ಬಳಸಿಕೊಳ್ಳಲು ಅಲ್ಲಿ ಅವರನ್ನು ನಿಲ್ಲಿಸಲಾಗಿದೆ ಎಂದರು.

ಡಾ. ಮಂಜುನಾಥ್ 8 ಲಕ್ಷ ಜನರಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಅವರ ಸೇವೆಯನ್ನು ಮೋದಿ ಮತ್ತು ಅಮಿತ್ ಶಾ ಅವರು ರಾಷ್ಟ್ರಮಟ್ಟದಲ್ಲಿ ಬಳಸಿಕೊಳ್ಳುವುದಕ್ಕಾಗಿ, ಅವರನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಚುನಾವಣೆಗೆ ನಿಲ್ಲಿಸಲು ಒಪ್ಪಿಸಿದರು. ಜನಸೇವೆ ಮಾಡಿ ಮನೆ‌ ಮಾತಾಗಿರುವ ಪ್ರಾಮಾಣಿಕ ಮಂಜುನಾಥ್ ಅವರಿಗೆ ಜನ ಮತ ನೀಡಬೇಕು ಎಂದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

3 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

5 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

5 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

5 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

5 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago