ನವದೆಹಲಿ,: ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ರಮ್ಯಾ ಅವರು ಪ್ರಧಾನಿ ನರೇಂದ್ರ ಮೋದಿ ಬೆಂಬಲಿಗರನ್ನು ಮೂರ್ಖರು ಎಂದು ಅಣಕಿಸಿದ್ದಾರೆ.
‘ನಿಮಗೆ ಗೊತ್ತೆ? ಮೋದಿ ಬೆಂಬಲಿಗರ ಪೈಕಿ ಮೂವರಲ್ಲಿ ಒಬ್ಬರು ಮತ್ತಿಬ್ಬರಂತೆ ಮೂರ್ಖರು’ ಎಂದಿರುವ ಮೇಮ್ಅನ್ನು ಟ್ವೀಟ್ ಮಾಡಿರುವ ರಮ್ಯಾ, ಇದು ನನ್ನ ಫೇವರೀಟ್ ಎಂದು ಬರೆದಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕಿ ಕಳೆದ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಬೆಂಬಲಿಸಿ ಮತ ಹಾಕಿದವರನ್ನು ಮೂರ್ಖರು ಎಂದಿದ್ದಾರೆ. 2014 ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಶೇ.32ರಷ್ಟು ಮತಗಳನ್ನು ಪಡೆದಿತ್ತು. ಇದೀಗ ಅಷ್ಟೂ ಜನರನ್ನು ಮೂರ್ಖರು ಎಂದಂತಾಗಿದೆ.
ಇದಕ್ಕೆ ಬಿಜೆಪಿ ಪಾಳಯದಿಂದಲೂ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಮ್ಯಾ ನಟನೆಯಲ್ಲಿ ವೈಫಲ್ಯ ಹೊಂದಿದಂತೆ ಐಟಿ ಸೆಲ್ ಹೆಡ್ ಆಗಿಯೂ ವೈಫಲ್ಯ ಹೊಂದಿದ್ದಾರೆ ಎಂದು ನಿಮಗೆ ಅನಿಸುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಮತ್ತೆ ಕೆಲವು ನೆಟ್ಟಿಗರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭಾವ ಚಿತ್ರವನ್ನು ಹಾಕಿ, ನಿಮಗೆ ಗೊತ್ತೆ? ರಾಹುಲ್ ಗಾಂಧಿಯ ಬೆಂಬಲಿಗರ ಪೈಕಿ ಮೂವರಲ್ಲಿ ಮೂವರು ರಾಹುಲ್ ಗಾಂಧಿ ಅವರಂತೆ ಮೂರ್ಖರು ಎಂದು ಕಾಲೆಳೆದಿದ್ದಾರೆ.
ಈ ಕುರಿತು ವರದಿ ಮಾಡಿದ ಎಎನ್ಐ ಟ್ವೀಟ್ಅನ್ನು ರೀಟ್ವೀಟ್ ಮಾಡಿರುವ ರಮ್ಯಾ ಬೆಂಬಲಿಸಿದ್ದಕ್ಕೆ ಧನ್ಯವಾದ ಎಂದಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…