ನವದೆಹಲಿ,: ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ರಮ್ಯಾ ಅವರು ಪ್ರಧಾನಿ ನರೇಂದ್ರ ಮೋದಿ ಬೆಂಬಲಿಗರನ್ನು ಮೂರ್ಖರು ಎಂದು ಅಣಕಿಸಿದ್ದಾರೆ.
‘ನಿಮಗೆ ಗೊತ್ತೆ? ಮೋದಿ ಬೆಂಬಲಿಗರ ಪೈಕಿ ಮೂವರಲ್ಲಿ ಒಬ್ಬರು ಮತ್ತಿಬ್ಬರಂತೆ ಮೂರ್ಖರು’ ಎಂದಿರುವ ಮೇಮ್ಅನ್ನು ಟ್ವೀಟ್ ಮಾಡಿರುವ ರಮ್ಯಾ, ಇದು ನನ್ನ ಫೇವರೀಟ್ ಎಂದು ಬರೆದಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕಿ ಕಳೆದ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಬೆಂಬಲಿಸಿ ಮತ ಹಾಕಿದವರನ್ನು ಮೂರ್ಖರು ಎಂದಿದ್ದಾರೆ. 2014 ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಶೇ.32ರಷ್ಟು ಮತಗಳನ್ನು ಪಡೆದಿತ್ತು. ಇದೀಗ ಅಷ್ಟೂ ಜನರನ್ನು ಮೂರ್ಖರು ಎಂದಂತಾಗಿದೆ.
ಇದಕ್ಕೆ ಬಿಜೆಪಿ ಪಾಳಯದಿಂದಲೂ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಮ್ಯಾ ನಟನೆಯಲ್ಲಿ ವೈಫಲ್ಯ ಹೊಂದಿದಂತೆ ಐಟಿ ಸೆಲ್ ಹೆಡ್ ಆಗಿಯೂ ವೈಫಲ್ಯ ಹೊಂದಿದ್ದಾರೆ ಎಂದು ನಿಮಗೆ ಅನಿಸುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಮತ್ತೆ ಕೆಲವು ನೆಟ್ಟಿಗರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭಾವ ಚಿತ್ರವನ್ನು ಹಾಕಿ, ನಿಮಗೆ ಗೊತ್ತೆ? ರಾಹುಲ್ ಗಾಂಧಿಯ ಬೆಂಬಲಿಗರ ಪೈಕಿ ಮೂವರಲ್ಲಿ ಮೂವರು ರಾಹುಲ್ ಗಾಂಧಿ ಅವರಂತೆ ಮೂರ್ಖರು ಎಂದು ಕಾಲೆಳೆದಿದ್ದಾರೆ.
ಈ ಕುರಿತು ವರದಿ ಮಾಡಿದ ಎಎನ್ಐ ಟ್ವೀಟ್ಅನ್ನು ರೀಟ್ವೀಟ್ ಮಾಡಿರುವ ರಮ್ಯಾ ಬೆಂಬಲಿಸಿದ್ದಕ್ಕೆ ಧನ್ಯವಾದ ಎಂದಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…