ಜಿಲ್ಲೆ

ಮೋದಿ ಭರವಸೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ: ಸದಾನಂದಗೌಡ

ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. 5 ವರ್ಷದ ಆಡಳಿತಾವಧಿ ಪೂರ್ಣಗೊಳ್ಳುವ ವೇಳಗೆ ಎಲ್ಲಾ ಭರವಸೆಗಳನ್ನೂ ಸಂಪೂರ್ಣವಾಗಿ ಈಡೇರಿಸುತ್ತೇವೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಅವರು ತಿಳಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು ಕಳೆದ ನಾಲ್ಕು ವರ್ಷಗಳಲ್ಲಿ ಜಗತ್ತು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳುವಾಗ ಭಾರತದ ಸಲಹೆ ಕೇಳುವ ಹಂತಕ್ಕೆ ನಮ್ಮ ದೇಶ ಬೆಳೆದಿದೆ. ಜಾಗತಿಕ ಮಟ್ಟದಲ್ಲಿ ದೇಶದ ಘನತೆಯನ್ನು ಹೆಚ್ಚಿಸುವ ಪ್ರಯತ್ನ ಮಾಡಿದ್ದೇವೆ. ವಿದೇಶಿ ವಿನಿಮಯ ಗಣನೀಯವಾಗಿ ಹೆಚ್ಚಿದ್ದು, 41,700 ಕೋಟಿ ಡಾಲರ್​ಗೆ ತಲುಪಿದೆ. ನಾಲ್ಕು ವರ್ಷಗಳಲ್ಲಿ ಭ್ರಷ್ಟಾಚಾರರಹಿತ ಪಾರದರ್ಶಕ ಆಡಳಿತ ತರುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.

ಈ ಮೊದಲು ನಮ್ಮ ಭಿಕ್ಷಾ ಪಾತ್ರೆಯನ್ನು ಎತ್ತಿಕೊಂಡು ಸಾಲ ಕೇಳುವ ಪರಿಸ್ಥಿತಿ ಇತ್ತು. ಈಗ ಆ ಪರಿಸ್ಥಿತಿ ಇಲ್ಲ. ದೇಶದ ಆರ್ಥಿಕ ಬೆಳವಣಿಗೆ ಉತ್ತಮವಾಗಿದೆ. ನಮ್ಮ ದೇಶದ ಅತ್ಯಂತ ವೇಗವಾಗಿ ಬೆಳವಣಿಗೆ ಕಂಡಿದ್ದು, ಜಿಡಿಪಿ ಬೆಳವಣಿಗೆ ದರ ಉತ್ತಮವಾಗಿದೆ.

ನಮ್ಮ ಸರ್ಕಾರ ಕಾವೇರಿ ನದಿ ನೀರಿನ ವಿಚಾರವಾಗಿ ಕೋರ್ಟ್​ ಮೊರೆ ಹೋಗಿ ಆಯಾ ರಾಜ್ಯಕ್ಕೆ ಸಿಗಬೇಕಾದ ಹಕ್ಕು ಸಿಗುವಂತೆ ನೋಡಿಕೊಂಡಿದ್ದೇವೆ. ಜತೆಗೆ ಮಹದಾಯಿ ವಿಚಾರವಾಗಿ ಸಹ ಕೋರ್ಟ್ ಹೊರಗೆ ಸಮಸ್ಯೆ ಪರಿಹರಿಸಲು ಪ್ರಯತ್ನಿಸದ್ದೇವೆ. ಆದರೆ, ಮಹದಾಯಿ ವಿಚಾರ ರಾಜಕೀಯ ತಿರುವು ಪಡೆದಿದೆ. ಮಹದಾಯಿ ವಿಚಾರವಾಗಿ ಗೋವಾ ಸರ್ಕಾರವನ್ನು ಉರುಳಿಸುವ ಬೆದರಿಕೆ ಒಡ್ಡಿ ಅಡ್ಡಗಾಲು ಹಾಕಿದವರು ಕಾಗ್ರೆಸ್​ನವರು ಬಿಜೆಪಿಯಲ್ಲ ಎಂದು ತಿಳಿಸಿದರು.

ಪೇಜಾವರ ಶ್ರೀಗಳು ಗಂಗಾ ನದಿ ಮತ್ತು ಕಪ್ಪು ಹಣದ ಬಗ್ಗೆ ಮಾತ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾವು ಅವರ ಸಲಹೆ ಪಡೆದು ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

18 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

20 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

20 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

20 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

20 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

20 hours ago