ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. 5 ವರ್ಷದ ಆಡಳಿತಾವಧಿ ಪೂರ್ಣಗೊಳ್ಳುವ ವೇಳಗೆ ಎಲ್ಲಾ ಭರವಸೆಗಳನ್ನೂ ಸಂಪೂರ್ಣವಾಗಿ ಈಡೇರಿಸುತ್ತೇವೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಅವರು ತಿಳಿಸಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು ಕಳೆದ ನಾಲ್ಕು ವರ್ಷಗಳಲ್ಲಿ ಜಗತ್ತು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳುವಾಗ ಭಾರತದ ಸಲಹೆ ಕೇಳುವ ಹಂತಕ್ಕೆ ನಮ್ಮ ದೇಶ ಬೆಳೆದಿದೆ. ಜಾಗತಿಕ ಮಟ್ಟದಲ್ಲಿ ದೇಶದ ಘನತೆಯನ್ನು ಹೆಚ್ಚಿಸುವ ಪ್ರಯತ್ನ ಮಾಡಿದ್ದೇವೆ. ವಿದೇಶಿ ವಿನಿಮಯ ಗಣನೀಯವಾಗಿ ಹೆಚ್ಚಿದ್ದು, 41,700 ಕೋಟಿ ಡಾಲರ್ಗೆ ತಲುಪಿದೆ. ನಾಲ್ಕು ವರ್ಷಗಳಲ್ಲಿ ಭ್ರಷ್ಟಾಚಾರರಹಿತ ಪಾರದರ್ಶಕ ಆಡಳಿತ ತರುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.
ಈ ಮೊದಲು ನಮ್ಮ ಭಿಕ್ಷಾ ಪಾತ್ರೆಯನ್ನು ಎತ್ತಿಕೊಂಡು ಸಾಲ ಕೇಳುವ ಪರಿಸ್ಥಿತಿ ಇತ್ತು. ಈಗ ಆ ಪರಿಸ್ಥಿತಿ ಇಲ್ಲ. ದೇಶದ ಆರ್ಥಿಕ ಬೆಳವಣಿಗೆ ಉತ್ತಮವಾಗಿದೆ. ನಮ್ಮ ದೇಶದ ಅತ್ಯಂತ ವೇಗವಾಗಿ ಬೆಳವಣಿಗೆ ಕಂಡಿದ್ದು, ಜಿಡಿಪಿ ಬೆಳವಣಿಗೆ ದರ ಉತ್ತಮವಾಗಿದೆ.
ನಮ್ಮ ಸರ್ಕಾರ ಕಾವೇರಿ ನದಿ ನೀರಿನ ವಿಚಾರವಾಗಿ ಕೋರ್ಟ್ ಮೊರೆ ಹೋಗಿ ಆಯಾ ರಾಜ್ಯಕ್ಕೆ ಸಿಗಬೇಕಾದ ಹಕ್ಕು ಸಿಗುವಂತೆ ನೋಡಿಕೊಂಡಿದ್ದೇವೆ. ಜತೆಗೆ ಮಹದಾಯಿ ವಿಚಾರವಾಗಿ ಸಹ ಕೋರ್ಟ್ ಹೊರಗೆ ಸಮಸ್ಯೆ ಪರಿಹರಿಸಲು ಪ್ರಯತ್ನಿಸದ್ದೇವೆ. ಆದರೆ, ಮಹದಾಯಿ ವಿಚಾರ ರಾಜಕೀಯ ತಿರುವು ಪಡೆದಿದೆ. ಮಹದಾಯಿ ವಿಚಾರವಾಗಿ ಗೋವಾ ಸರ್ಕಾರವನ್ನು ಉರುಳಿಸುವ ಬೆದರಿಕೆ ಒಡ್ಡಿ ಅಡ್ಡಗಾಲು ಹಾಕಿದವರು ಕಾಗ್ರೆಸ್ನವರು ಬಿಜೆಪಿಯಲ್ಲ ಎಂದು ತಿಳಿಸಿದರು.
ಪೇಜಾವರ ಶ್ರೀಗಳು ಗಂಗಾ ನದಿ ಮತ್ತು ಕಪ್ಪು ಹಣದ ಬಗ್ಗೆ ಮಾತ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾವು ಅವರ ಸಲಹೆ ಪಡೆದು ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…