ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಸೋಲಿಸಲು ಬಿಜೆಪಿ ಬಿಗ್ ಪ್ಲಾನ್ ಮಾಡಿದ್ದು, ಪ್ರಧಾನಿ ಮೋದಿ ಅವರು ರಾಜ್ಯದ 7 ಕಡೆ ಪ್ರಚಾರ ಭಾಷಣ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜ್ಯದಲ್ಲಿ ಪ್ರಧಾನಿ ಅವರು 7 ಸಮಾವೇಶಗಳಲ್ಲಿ ಭಾಗಿವಹಿಸಲಿದ್ದಾರೆ ಎನ್ನಲಾಗಿದ್ದು, ದಕ್ಷಿಣದಲ್ಲಿ ಬೆಂಗಳೂರು, ತುಮಕೂರು, ಮೈಸೂರು, ಮಂಗಳೂರಿನಲ್ಲಿ ಕಾರ್ಯಕ್ರಮ ಮಾಡಿದರೆ, ಉತ್ತರದಲ್ಲಿ ಬೆಳಗಾವಿ, ದಾವಣಗೆರೆ, ರಾಯಚೂರು ಅಥವಾ ಕೊಪ್ಪಳದಲ್ಲಿ ಸಮಾವೇಶ ನಡೆಸಲು ಬಿಜೆಪಿ ಮುಂದಾಗಿದೆ.
ಇನ್ನೆರಡು ದಿನಗಳಲ್ಲಿ ಪ್ರಚಾರ ಕಾರ್ಯಕ್ರಮದ ದಿನಾಂಕ, ಸ್ಥಳ ಅಂತಿಮವಾಗಲಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿರುವ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮೋದಿ ಭಾಷಣ ಮಾಡಲಿದ್ದಾರೆ. ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ಗೆ ನೀಡಿದ ಬಳಿಕ ತುಮಕೂರಿನಿಂದ ಸ್ಪರ್ಧಿಸುತ್ತಿರುವ ದೇವೇಗೌಡರನ್ನು ಸೋಲಿಸಲು ತುಮಕೂರಿಗೂ ಮೋದಿಯನ್ನು ಕರೆತರಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…