ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನು ಉದ್ದೇಶಿಸಿ ಮಾಡಿದ ಭಾಷಣ ಅತ್ಯಂತ ನಿರಾಶಾದಾಯಕ. ಕೊರೋನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಮಂಗಳವಾರ ರಾತ್ರಿ, ದೇಶವನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ ಬಳಿಕ ಟ್ವೀಟ್ ಮಾಡಿದ ಅವರು, “ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕವಿಲ್ಲದೆ, ಐಸಿಯು ಹಾಸಿಗಳಿಲ್ಲದೇ, ಪ್ರಾಣ ರಕ್ಷಕ ಔಷಧ ರೆಮ್ ಡೆಸಿವಿರ್ ಸಿಗದೇ ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಸಮಸ್ಯೆಗಳಿಗೆ ಯಾವುದೇ ಪರಿಹಾರ ನೀಡದ ನರೇಂದ್ರ ಮೋದಿ ಜನತೆಗೆ ಜವಾಬ್ದಾರಿಯ ಪಾಠ ಹೇಳಿದ್ದಾರೆ. ಪ್ರಧಾನಿಗಳೇ ಮೊದಲು ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ” ಎಂದು ಟೀಕಿಸಿದ್ದಾರೆ
ಭಾರತ – ಇಂಗ್ಲೆಂಡ್ ಏರ್ ಇಂಡಿಯಾ ವಿಮಾನ ಹಾರಾಟ ರದ್ದು -Vishwanews24
“ಕೊರೋನಾ ಕಾರಣದಿಂದಾಗಿ ಲಾಕ್ ಡೌನ್ ಅನಿವಾರ್ಯ ಎಂಬಂತೆ ರಾಜ್ಯ ಬಿಜೆಪಿ ಸರ್ಕಾರ ಮಾತನಾಡುತ್ತಿದೆ. ಲಾಕ್ಡೌನ್ ಹೇರಿದರೆ ಕಷ್ಟ-ನಷ್ಟಕ್ಕೀಡಾಗುವ ಜನತೆಗೆ ಕೇಂದ್ರ ಬಿಜೆಪಿ ಸರ್ಕಾರ ನೀಡುವ ನೆರವಿನ ಘೋಷಣೆಯನ್ನು ಜನ ನಿರೀಕ್ಷಿಸಿದ್ದರು. ಮೋದಿ ಭಾಷಣ ’ನಿಮ್ಮ ತಲೆ ಮೇಲೆ ನಿಮ್ಮ ಕೈ ‘ ಎಂಬ ಸಂದೇಶ ನೀಡಿದೆ” ಎಂದು ಹೇಳಿದ್ದಾರೆ.
“ಕೊರೋನಾ ಪರಿಣಾಮವನ್ನು ಸಮರ್ಥವಾಗಿ ನಿರ್ವಹಿಸಲಾಗದೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯ ಅಂಚಿಗೆ ಬಂದು ನಿಂತಿದೆ. ಇದಕ್ಕೆ ನ್ಯಾಯಬದ್ಧವಾಗಿ ತೆರಿಗೆ ಪಾಲನ್ನು ನೀಡದಿರುವ ಕೇಂದ್ರ ಬಿಜೆಪಿ ಸರ್ಕಾರವು ಕಾರಣ ಎಂದು ಟೀಕಿಸಿದ್ದಾರೆ. ಪ್ರಧಾನಿಯವರೇ ನೀವು ವಿಶೇಷ ಆರ್ಥಿಕ ನೆರವು ಕೊಡುವುದು ಬೇಡ, ನಮ್ಮ ನ್ಯಾಯಬದ್ಧವಾದ ಪಾಲಾದರೂ ನೀಡಿ ಪುಣ್ಯ ಕಟ್ಟಿಕೊಳ್ಳಿ ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕೊರೊನಾ ಅಬ್ಬರ : ದೇಶದಲ್ಲಿ ಒಂದೇ ದಿನ 2.95 ಲಕ್ಷ ಸೋಂಕು ಪತ್ತೆ , 2,023 ಮಂದಿ ಬಲಿ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…