Featured

ಮೋದಿ ಭಾಷಣ ಮಾಡಿದ ತಕ್ಷಣ ಬಿಜೆಪಿ ಗೆಲ್ಲುವುದಿಲ್ಲ ,ಮೋದಿ ಬಂದರೆ ಜನ ಮೋಡಿ ಆಗುವುದಿಲ್ಲ : ಸಿದ್ದರಾಮಯ್ಯ – Vishwanews24

ನಾನು ಆರ್ ಎಸ್ ಎಸ್ ಬಗ್ಗೆ ಟೀಕೆ ಮಾಡುತ್ತೇನೆ ,ಸತ್ಯ ಹೇಳುತ್ತೇನೆ ಎಂದು ನನ್ನ ಕಂಡರೆ ಮೋದಿಗೆ ಭಯ

 ಹುಬ್ಬಳ್ಳಿ: ಕಂದಾಯ ಗ್ರಾಮ, ಅರಣ್ಯ ಇಲಾಖೆಯ ಕಾನೂನು ತಿದ್ದುಪಡಿ ಮಾಡಿದ್ದು ನಾವು. ತಾಂಡಾ, ಹಟ್ಟಿ, ದೊಡ್ಡಿಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದವರು ನಾವು. ಈಗ ಚುನಾವಣೆ ಇರುವ ಹಿನ್ನೆಲೆ ಬಿಜೆಪಿಯವರು ಪ್ರಧಾನಿ ಮೋದಿಯವರನ್ನು ಕರೆಯಿಸಿ ನಾವೇ ಮಾಡಿದವರೆಂದು ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿಸಲು ಕಾನೂನು ಮಾಡಿದ್ದೆ. ಅಡುಗೆ ಮಾಡಿದವರು ನಾವು, ಊಟ ಮಾಡುವವರು ಬಿಜೆಪಿಯವರು. ಸೇವಾಲಾಲ ಜಯಂತಿ, ಲಂಬಾಣಿ ಅಭಿವೃದ್ಧಿ ನಿಗಮ ಆ‌ರಂಭಿಸಿದ್ದು ನಾವು. ಸೇವಾಲಾಲ ಹುಟ್ಟಿದ ಸ್ಥಳ ಅಭಿವೃದ್ಧಿಪಡಿಸಿದ್ದೇವೆ. 450 ಕೋಟಿ ರೂ. ಅನುದಾನ ನೀಡಿದ್ದೇವೆ. ಲಂಬಾಣಿ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರ ಕೇವಲ ಮೂರು ವರ್ಷದಲ್ಲಿ ಕೇವಲ 70 ಕೋಟಿ ರೂ. ಕೊಟ್ಟಿದ್ದಾರೆ. ಹಕ್ಕು ಪತ್ರ ನಾವು ಸಿದ್ಧಪಡಿಸಿದ್ದೇವೆ. ಈಗ ಅವರು ವಿತರಣೆ ಮಾಡುತ್ತಿದ್ದಾರೆ ಎಂದರು.

ನಮ್ಮ ಸರ್ಕಾರದಲ್ಲಿ 30 ಸಾವಿರ ಕೋಟಿ ರೂ. ಎಸ್ಸಿಇಪಿಟಿ ಹಣವಿತ್ತು. ಈಗ ಅದು 42 ಸಾವಿರ ಕೋಟಿ ರೂ. ಆಗಬೇಕಿತ್ತು. ಆದರೆ 28 ಸಾವಿರ ಕೋಟಿಯಾಗಿದೆ. ಇದರ ಅರ್ಥ ಬಿಜೆಪಿ ಎಸ್ಸಿಇಸ್ಪಿಟಿ ಹಣವನ್ನು ಬೇರೆ ಕಡೆ ಡೈವರ್ಟ್ ಮಾಡಿದ್ದಾರೆ. ಬಿಜೆಪಿ ಎಂದರೆ ಸುಳ್ಳನ್ನು ಉತ್ಪಾದಿಸುವ ಫ್ಯಾಕ್ಟರಿ. ನೂರು ಬಾರಿ ಸುಳ್ಳು ಹೇಳಿ ಅದನ್ನೇ ಸತ್ಯ ಎಂದು ಬಿಂಬಿಸುತ್ತಾರೆ. ನರೇಂದ್ರ ಮೋದಿಯವರಿಂದ ಬರೀ ಸುಳ್ಳು ಹೇಳಿಸುತ್ತಿದ್ದಾರೆ ಎಂದರು.

ನನಗೆ ಮೋದಿ ಕಂಡರೆ ಭಯವಿಲ್ಲ. ಆದರೆ ನನ್ನ ಕಂಡರೆ ಅವರಿಗೆ ಭಯ. ಏಕೆಂದರೆ ನಾನು ಆರ್ ಎಸ್ ಎಸ್ ಬಗ್ಗೆ ಟೀಕೆ ಮಾಡುತ್ತೇನೆ. ಸತ್ಯ ಹೇಳುತ್ತೇನೆ ಎನ್ನುವ ಭಯ ಅವರಿಗೆ ಎಂದರು.

ಮೋದಿ ಭಾಷಣ ಮಾಡಿದ ತಕ್ಷಣ ಬಿಜೆಪಿ ಗೆಲ್ಲುವುದಿಲ್ಲ. ಸುಳ್ಳು ಹೇಳಿದರೆ ಜನ ನಂಬುವುದಿಲ್ಲ. ಮೋದಿ ಬಂದರೆ ಜನ ಮೋಡಿ ಆಗುವುದಿಲ್ಲ. ಯಾರು ಏನೆಂಬುದನ್ನು ಜನರೇ ತೀರ್ಮಾನ ಮಾಡುತ್ತಾರೆ ಎಂದರು

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

4 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

4 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

4 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

4 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

4 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

4 days ago