ಬೆಂಗಳೂರು: ನರೇಂದ್ರ ಮೋದಿ ಬರ್ತಾರೆ, ಗೆಲ್ಲಿಸ್ತಾರೆ ಎಂದು ನಂಬಿ ಕೂತಿರುವ ರಾಜ್ಯ ನಾಯಕರಿಗೆ ಬಿಗ್ ಶಾಕ್ ಸಿಕ್ಕಿದೆ. ಬಿಜೆಪಿ ನಾಯಕರ ವರ್ತನೆಯಿಂದ ಪ್ರಧಾನಿ ನರೇಂದ್ರ ಮೋದಿ ಎಂಬ ಚರ್ಚೆಗಳು ಶುರವಾಗಿವೆ.
ಮೋದಿಯ ಮೇಲೆ ಅತಿಯಾದ ಅವಲಂಬನೆ ಆಗಿ ರಾಜ್ಯದ ನಾಯಕರ ಶ್ರಮ ಕಡಿಮೆ ಆಗಿದೆಯಾ? ಎಂಬ ಪ್ರಶ್ನೆಗಳೆದ್ದಿವೆ. ಹಾಗಾದ್ರೆ ಬಿಜೆಪಿ ಹೈಕಮಾಂಡ್ಗೆ ತಲುಪಿದ ಆ ವರದಿಯಿಂದಲೇ ಮೋದಿ ಮಹಾ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.
ಅಂದಹಾಗೆ 2024ರ ಚುನಾವಣೆಗೆ ಇನ್ನೂ 400 ದಿನ ಬಾಕಿ ಇದೆ. ಮಂಗಳವಾರ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಸಮಾರೋಪದಲ್ಲೇ ಪ್ರಧಾನಿ ನರೇಂದ್ರ ಮೋದಿ ಕಹಳೆ ಊದಿದ್ದಾರೆ. ಮೋದಿಯಿಂದ ಎಚ್ಚರಿಕೆಯ ಖಡಕ್ ಸಂದೇಶ ರವಾನೆಯಾಗಿದೆ ಎನ್ನಲಾಗಿದ್ದು, ಮೋದಿ ಭ್ರಮೆ ಬೇಡ, ಮೋದಿ ಹೆಸರೇಳಿಕೊಂಡು ಕೂರಬೇಡಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಅತಿಯಾದ ಆತ್ಮವಿಶ್ವಾಸ ಬೇಡ, ಮೊದಲು ಮತದಾರರ ಮನ ಗೆಲ್ಲಿ ಎಂದು ಮೋದಿಯಿಂದ ಸಲಹೆ ಕೊಟ್ಟಿದ್ದು ಕರ್ನಾಟಕವೇ ಮೊದಲ ಟಾರ್ಗೆಟ್ ಎಂಬ ಚರ್ಚೆ ಆಗುತ್ತಿದೆ.
ಅಂದಹಾಗೆ ಕರ್ನಾಟಕ ಸೇರಿದಂತೆ ಮುಂಬರುವ ಚುನಾವಣೆಗಳ ತಂತ್ರಗಾರಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಬದಲಿಸುವ ಸುಳಿವು ಎನ್ನಲಾಗಿದೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ಒಟ್ಟು 9 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮೇಘಾಲಯ, ನಾಗಲ್ಯಾಂಡ್, ತ್ರಿಪುರ ಬಳಿಕ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದ ಬಳಿಕ ಮಿಝೋರಾಂ, ಛತ್ತೀಸ್ಗಢ್, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಆದ್ರೆ 25 ಸಂಸದರನ್ನು ಕೊಟ್ಟಿರುವ ಕರ್ನಾಟಕದ ಬಗ್ಗೆ ಬಿಜೆಪಿ ಹೈಕಮಾಂಡ್ಗೆ ಮೊದಲ ಸವಾಲಾಗಿದೆ.
Join our Whatsapp group by clicking the below link 👇👇
https://chat.whatsapp.com/KfUmhXQKZb114i4QHNvqEK
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…