ಭುವನೇಶ್ವರ್: ಇಂದು ಓಡಿಸ್ಸಾದ ಭುವನೇಶ್ವರ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಎಐಸಿಸಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಬಗ್ಗೆ ಮಾತನಾಡಿದ್ದು, ನಾನು ಅವರೊಂದಿಗೆ ಪ್ರಬಲವಾಗಿ ಸ್ಪರ್ಧಿಸಲು ಇಚ್ಛಿಸುತ್ತೇನೆ ಅವರನ್ನು ಮತ್ತೆ ಪ್ರಧಾನಿಯಾಗಲು ನಾನು ಬಿಡುವುದಿಲ್ಲ ಆದರೆ ಅವರನ್ನು ದ್ವೇಷಿಸುವುದಿಲ್ಲ ಎಂದಿದ್ದಾರೆ.
ಭುವನೇಶ್ವರದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿದ ರಾಹುಲ್, ನಾನು ಪ್ರತಿದಿನ ಅವರ ವಿರುದ್ಧ ವಾಗ್ದಾಳಿ ನಡೆಸುತ್ತೇನೆ. ಅವರೂ ಕೂಡ ನನ್ನ ವಿರುದ್ಧ ವಾಗ್ದಾಳಿ ನಡೆಸುತ್ತಾರೆ. ಅವರು ಮುಂದಿನ ಪ್ರಧಾನಿಯಾಗಬಾರದು, ದೇಶದಲ್ಲಿ ಕಾಂಗ್ರೆಸ್ ಜಯಗಳಿಸಬೇಕೆಂದು ಎಂಬುದು ಕೂಡ ನನ್ನ ಆಶಯ.ಆದರೆ ನಾನು ಪ್ರಧಾನಿಯನ್ನು ಎಂದೂ ದ್ವೇಷಿಸುವುದಿಲ್ಲ. ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡುತ್ತೇನೆ’. ಪ್ರಧಾನಿ ಮೋದಿ ಅವರು ನನ್ನನ್ನು ನಿಂದಿಸಿದಷ್ಟೂ ನಾನು ಅವರನ್ನು ಅಪ್ಪಿಕೊಳ್ಳಲು ಇಷ್ಟ ಪಡುತ್ತೇನೆ ಎಂದು ರಾಹುಲ್ ಹೇಳಿದ್ದಾರೆ.
ಕಾಂಗ್ರೆಸ್ ವಿರೋಧ ಪಕ್ಷದೊಂದಿಗೆ ಪ್ರಬಲ ಸ್ಪರ್ಧೆ ನೀಡಲು ಬಯಸುತ್ತದೆ.ಆದರೆ ಕಾಂಗ್ರೆಸ್ಸಿಗರು ಯಾರನ್ನೂ ದ್ವೇಷಿಸುವುದಿಲ್ಲ ಎಂದಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…