Featured

ಮೋದಿ ಮತ್ತೆ ಪ್ರಧಾನಿ ಆದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ : ಹೆಚ್​.ಡಿ ರೇವಣ್ಣ – Vishwanews24

ಮೈಸೂರು: 2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿ ಆದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಹೇಳಿದ್ದರು. ಆದರೆ ನಿವೃತ್ತಿ ಪಡೆಯದೆ 2019ರಲ್ಲೂ ಹಾಸನ ಬಿಟ್ಟು ತುಮಕೂರಿನಲ್ಲಿ ಸ್ಪರ್ಧಿಸಿದ್ದಾರೆ. ಈಗ ರಾಜಕೀಯ ನಿವೃತ್ತಿ ಪಡೆಯುವ ವರಸೆ ದೇವೇಗೌಡರ ಹಿರಿಯ ಮಗ ಹೆಚ್ ಡಿ ರೇವಣ್ಣ ಅವರದ್ದು. ಹೌದು ಮೋದಿ ಮತ್ತೊಮ್ಮೆ ಪ್ರಧಾನಿ ಆದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 6, 8, 22 ನಮಗೆ ಲಕ್ಕಿ, 18 ಅಂದರೆ 1+8=9. 2018 ಇತ್ತು 8+1=9 ಅದಕ್ಕೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದು,ಈ ಬಾರಿ ಕೂಡ 18 ರಂದು ಮತದಾನ ಇದೆ. ಹೀಗಾಗಿ ಮೊದಲ‌ ಹಂತದ 14 ಸ್ಥಾನ ಮೈತ್ರಿ ಅಭ್ಯರ್ಥಿ ಗೆಲ್ಲುತ್ತಾರೆ. ರಾಜ್ಯದಲ್ಲಿ ಅಚ್ಚರಿ ಫಲಿತಾಂಶ ಬರುತ್ತೆ.. 9 ಬಹಳ ಅದೃಷ್ಟ ಸಂಖ್ಯೆ. ನಾವು ರಾಜ್ಯದಲ್ಲಿ 22 ಲೋಕಸಭೆ ಸೀಟುಗಳನ್ನು ಗೆಲ್ಲುತ್ತೇವೆ. ಆ 22 ನಂಬರ್ ನಮಗೆ ಲಕ್ಕಿ. ಅದು ಯಡಿಯೂರಪ್ಪನವರಿಗೆ ಲಕ್ಕಿ ಆಗಲ್ಲ. .  ಈಗಲೂ 18ರಂದು ಚುನಾವಣೆ ಇದೆ. 1+8 ಈಗಲೂ ಯುಪಿಎ ಅಧಿಕಾರಕ್ಕೆ ಬರಲಿದೆ ಎಂದರು.

ಇದೇ ವೇಳೆ ಅಂಬರೀಶ್ ಅವರ ಬಗ್ಗೆ ನಾನು ಮಾತನಾಡಲು ಹೋಗಲ್ಲ. ಅಂಬರೀಶ್ ಬಗ್ಗೆ ನನಗೆ ಗೌರವ ಇದೆ. ಕಳೆದ ಬಾರಿ ಅವರ ಮನೆಗೆ ಬಂದ ಟಿಕೆಟ್ ತಗೊಂಡಿಲ್ಲ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬರುವ ಹೋಪ್ ಇರ್ಲಿಲ್ಲ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಸಿಎಚ್ ವಿಜಯ್ ಶಂಕರ್, ಆರ್ ಧ್ರುವನಾರಾಯಣ್ ಗೆ ಮತ ಹಾಕಿ. ಸಿದ್ದರಾಮಯ್ಯ ಮತ್ತು ದೇವೇಗೌಡರು ಒಟ್ಟಾಗಿ ಪ್ರಚಾರ ಮಾಡಲಿದ್ದಾರೆ. ಮಂಡ್ಯ, ಹಾಸನ, ಮೈಸೂರು, ಚಾಮರಾಜನಗರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ. ಅವರ ಗೆಲುವಿಗೆ ನಮ್ಮ ದೋಸ್ತಿ ಪಕ್ಷದ ನಾಯಕರು ಶ್ರಮವಹಿಸಿದ್ದಾರೆ ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago