Featured

ಮೋದಿ ಮತ್ತೆ ಪ್ರಧಾನಿ ಆದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ : ಹೆಚ್​.ಡಿ ರೇವಣ್ಣ – Vishwanews24

ಮೈಸೂರು: 2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿ ಆದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಹೇಳಿದ್ದರು. ಆದರೆ ನಿವೃತ್ತಿ ಪಡೆಯದೆ 2019ರಲ್ಲೂ ಹಾಸನ ಬಿಟ್ಟು ತುಮಕೂರಿನಲ್ಲಿ ಸ್ಪರ್ಧಿಸಿದ್ದಾರೆ. ಈಗ ರಾಜಕೀಯ ನಿವೃತ್ತಿ ಪಡೆಯುವ ವರಸೆ ದೇವೇಗೌಡರ ಹಿರಿಯ ಮಗ ಹೆಚ್ ಡಿ ರೇವಣ್ಣ ಅವರದ್ದು. ಹೌದು ಮೋದಿ ಮತ್ತೊಮ್ಮೆ ಪ್ರಧಾನಿ ಆದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 6, 8, 22 ನಮಗೆ ಲಕ್ಕಿ, 18 ಅಂದರೆ 1+8=9. 2018 ಇತ್ತು 8+1=9 ಅದಕ್ಕೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದು,ಈ ಬಾರಿ ಕೂಡ 18 ರಂದು ಮತದಾನ ಇದೆ. ಹೀಗಾಗಿ ಮೊದಲ‌ ಹಂತದ 14 ಸ್ಥಾನ ಮೈತ್ರಿ ಅಭ್ಯರ್ಥಿ ಗೆಲ್ಲುತ್ತಾರೆ. ರಾಜ್ಯದಲ್ಲಿ ಅಚ್ಚರಿ ಫಲಿತಾಂಶ ಬರುತ್ತೆ.. 9 ಬಹಳ ಅದೃಷ್ಟ ಸಂಖ್ಯೆ. ನಾವು ರಾಜ್ಯದಲ್ಲಿ 22 ಲೋಕಸಭೆ ಸೀಟುಗಳನ್ನು ಗೆಲ್ಲುತ್ತೇವೆ. ಆ 22 ನಂಬರ್ ನಮಗೆ ಲಕ್ಕಿ. ಅದು ಯಡಿಯೂರಪ್ಪನವರಿಗೆ ಲಕ್ಕಿ ಆಗಲ್ಲ. .  ಈಗಲೂ 18ರಂದು ಚುನಾವಣೆ ಇದೆ. 1+8 ಈಗಲೂ ಯುಪಿಎ ಅಧಿಕಾರಕ್ಕೆ ಬರಲಿದೆ ಎಂದರು.

ಇದೇ ವೇಳೆ ಅಂಬರೀಶ್ ಅವರ ಬಗ್ಗೆ ನಾನು ಮಾತನಾಡಲು ಹೋಗಲ್ಲ. ಅಂಬರೀಶ್ ಬಗ್ಗೆ ನನಗೆ ಗೌರವ ಇದೆ. ಕಳೆದ ಬಾರಿ ಅವರ ಮನೆಗೆ ಬಂದ ಟಿಕೆಟ್ ತಗೊಂಡಿಲ್ಲ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬರುವ ಹೋಪ್ ಇರ್ಲಿಲ್ಲ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಸಿಎಚ್ ವಿಜಯ್ ಶಂಕರ್, ಆರ್ ಧ್ರುವನಾರಾಯಣ್ ಗೆ ಮತ ಹಾಕಿ. ಸಿದ್ದರಾಮಯ್ಯ ಮತ್ತು ದೇವೇಗೌಡರು ಒಟ್ಟಾಗಿ ಪ್ರಚಾರ ಮಾಡಲಿದ್ದಾರೆ. ಮಂಡ್ಯ, ಹಾಸನ, ಮೈಸೂರು, ಚಾಮರಾಜನಗರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ. ಅವರ ಗೆಲುವಿಗೆ ನಮ್ಮ ದೋಸ್ತಿ ಪಕ್ಷದ ನಾಯಕರು ಶ್ರಮವಹಿಸಿದ್ದಾರೆ ಎಂದರು.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

12 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

12 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

12 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

13 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

13 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

13 hours ago