Featured

ಮೋದಿ ಮತ್ತೆ ಪ್ರಧಾನಿ ಆದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ : ಹೆಚ್​.ಡಿ ರೇವಣ್ಣ – Vishwanews24

ಮೈಸೂರು: 2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿ ಆದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಹೇಳಿದ್ದರು. ಆದರೆ ನಿವೃತ್ತಿ ಪಡೆಯದೆ 2019ರಲ್ಲೂ ಹಾಸನ ಬಿಟ್ಟು ತುಮಕೂರಿನಲ್ಲಿ ಸ್ಪರ್ಧಿಸಿದ್ದಾರೆ. ಈಗ ರಾಜಕೀಯ ನಿವೃತ್ತಿ ಪಡೆಯುವ ವರಸೆ ದೇವೇಗೌಡರ ಹಿರಿಯ ಮಗ ಹೆಚ್ ಡಿ ರೇವಣ್ಣ ಅವರದ್ದು. ಹೌದು ಮೋದಿ ಮತ್ತೊಮ್ಮೆ ಪ್ರಧಾನಿ ಆದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 6, 8, 22 ನಮಗೆ ಲಕ್ಕಿ, 18 ಅಂದರೆ 1+8=9. 2018 ಇತ್ತು 8+1=9 ಅದಕ್ಕೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದು,ಈ ಬಾರಿ ಕೂಡ 18 ರಂದು ಮತದಾನ ಇದೆ. ಹೀಗಾಗಿ ಮೊದಲ‌ ಹಂತದ 14 ಸ್ಥಾನ ಮೈತ್ರಿ ಅಭ್ಯರ್ಥಿ ಗೆಲ್ಲುತ್ತಾರೆ. ರಾಜ್ಯದಲ್ಲಿ ಅಚ್ಚರಿ ಫಲಿತಾಂಶ ಬರುತ್ತೆ.. 9 ಬಹಳ ಅದೃಷ್ಟ ಸಂಖ್ಯೆ. ನಾವು ರಾಜ್ಯದಲ್ಲಿ 22 ಲೋಕಸಭೆ ಸೀಟುಗಳನ್ನು ಗೆಲ್ಲುತ್ತೇವೆ. ಆ 22 ನಂಬರ್ ನಮಗೆ ಲಕ್ಕಿ. ಅದು ಯಡಿಯೂರಪ್ಪನವರಿಗೆ ಲಕ್ಕಿ ಆಗಲ್ಲ. .  ಈಗಲೂ 18ರಂದು ಚುನಾವಣೆ ಇದೆ. 1+8 ಈಗಲೂ ಯುಪಿಎ ಅಧಿಕಾರಕ್ಕೆ ಬರಲಿದೆ ಎಂದರು.

ಇದೇ ವೇಳೆ ಅಂಬರೀಶ್ ಅವರ ಬಗ್ಗೆ ನಾನು ಮಾತನಾಡಲು ಹೋಗಲ್ಲ. ಅಂಬರೀಶ್ ಬಗ್ಗೆ ನನಗೆ ಗೌರವ ಇದೆ. ಕಳೆದ ಬಾರಿ ಅವರ ಮನೆಗೆ ಬಂದ ಟಿಕೆಟ್ ತಗೊಂಡಿಲ್ಲ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬರುವ ಹೋಪ್ ಇರ್ಲಿಲ್ಲ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಸಿಎಚ್ ವಿಜಯ್ ಶಂಕರ್, ಆರ್ ಧ್ರುವನಾರಾಯಣ್ ಗೆ ಮತ ಹಾಕಿ. ಸಿದ್ದರಾಮಯ್ಯ ಮತ್ತು ದೇವೇಗೌಡರು ಒಟ್ಟಾಗಿ ಪ್ರಚಾರ ಮಾಡಲಿದ್ದಾರೆ. ಮಂಡ್ಯ, ಹಾಸನ, ಮೈಸೂರು, ಚಾಮರಾಜನಗರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ. ಅವರ ಗೆಲುವಿಗೆ ನಮ್ಮ ದೋಸ್ತಿ ಪಕ್ಷದ ನಾಯಕರು ಶ್ರಮವಹಿಸಿದ್ದಾರೆ ಎಂದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

16 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

16 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

16 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

17 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

17 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

19 hours ago