ಕಟಪಾಡಿ: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಗೊಂದಲ ಸೃಷ್ಟಿಸುತ್ತಿರುವ ಕಾಂಗ್ರೆಸಿಗರ ವಿರುದ್ಧ ರಚನಾತ್ಮಕವಾಗಿ ಹೋರಾಡುವ ಮೂಲಕ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿಯನ್ನಾಗಿಸಬೇಕಾಗಿದೆ.
ಮೋದಿ ಮತ್ತೊಮ್ಮೆ ಎಂಬ ಘೋಷಣೆಯೊಂದಿಗೆ ಚುನಾವಣೆ ಎದುರಿಸಲು ಕಾರ್ಯಕರ್ತರು ಈಗಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಹೇಳಿದರು.
ಕಾಪು ವೀರಭದ್ರ ಸಭಾಭವನದಲ್ಲಿ ಮಂಗಳವಾರ ನಡೆದ ಕಾಪು ಕ್ಷೇತ್ರ ಬಿಜೆಪಿ ಕಾರ್ಯಕಾರಣಿಯನ್ನು ಉದ್ಘಾಟಿಸಿ ಮಾತನಾಡಿದರು.
ಪಕ್ಷ ದ ಸಾಮಾನ್ಯ ಕಾರ್ಯಕರ್ತರಾಗಿದ್ದ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡುವ ಮೂಲಕ ಬಿಜೆಪಿ ಪಕ್ಷ ದ ಸಿದ್ಧಾಂತ ಏನು ಎನ್ನುವುದನ್ನು ತೋರಿಸಿಕೊಟ್ಟಿದೆ. ಬಿಜೆಪಿಗೆ ಕಾರ್ಯಕರ್ತರೇ ಪ್ರಮುಖ ಆಸ್ತಿ. ಕಾರ್ಯಕರ್ತರ ಮೂಲಕವೇ ಅಧಿಕಾರಕ್ಕೆ ಬಂದಿರುವ ಸರಕಾರ ನಮ್ಮದು. ಅದೇ ಕಾರ್ಯಕರ್ತರ ಬಲದಿಂದಲೇ ಬಹುಮತದೊಂದಿಗೆ ಚುಣಾವಣೆಯಲ್ಲಿ ಗೆಲ್ಲಿಸೋಣ ಎಂದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶ್ಯಾಮಲಾ ಕುಂದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಕಾರ್ಯದರ್ಶಿಗಳಾದ ಸುನೀತಾ ನಾಯಕ್, ಸಂಧ್ಯಾ ರಮೇಶ್, ರಮಾಕಾಂತ್ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…