Featured

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಇದು ದೇಶದ ಅಭಿವೃದ್ಧಿಗೆ ಬಹುಮುಖ್ಯ :ರಾಜ್ಯಪಾಲ ಕಲ್ಯಾಣ್ ಸಿಂಗ್ – Vishwanews24

ಹೊಸದಿಲ್ಲಿ: ಸಂವಿಧಾನಾತ್ಮಕ ಹುದ್ದೆಯಲ್ಲಿರುವುದನ್ನು ಮರೆತು ಬಿಜೆಪಿ ಪರ ಮತಯಾಚಿಸುವುದರ ಮೂಲಕ ರಾಜಸ್ಥಾನ ರಾಜ್ಯಪಾಲರಾದ ಕಲ್ಯಾಣ್ ಸಿಂಗ್ ಹೇಳಿದ್ದಾರೆ.
ಅಲಿಘಡದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, ನಾವೆಲ್ಲ ಬಿಜೆಪಿ ಕಾರ್ಯಕರ್ತರು. ಪಕ್ಷದ ಗೆಲುವಿಗಾಗಿ ಮತ್ತು ಮತ್ತೆ ನರೇಂದ್ರ ಮೋದಿಯನ್ನು ಪ್ರಧಾನಿಯನ್ನಾಗಿಸಲು ಕೆಲಸ ಮಾಡುತ್ತಿದ್ದೇವೆ ಎಂದವರು ಹೇಳಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ದೇಶದ ಹಿತದೃಷ್ಟಿಯಿಂದ ಮಹತ್ವದ್ದು ಎಂದಿದ್ದಾರೆ ಕಲ್ಯಾಣ್ ಸಿಂಗ್.

ಸಂವಿಧಾನಾತ್ಮಕ ಸ್ಥಾನ ಹೊಂದಿರುವ ಸಿಂಗ್ ಯಾವುದೇ ರಾಜಕೀಯ ಸಂಬಂಧವನ್ನು ಹೊಂದಿರಬಾರದು. ಆದರೆ ರಾಜ್ಯಪಾಲರ ಹುದ್ದೆಯಲ್ಲಿರುವ ಅವರು ಒಂದು ಪಕ್ಷದ ಪರವಾಗಿ ಮಾತನಾಡಿದ್ದು ಎಲ್ಲರು ಹುಬ್ಬೇರಿಸುವಂತೆ ಮಾಡಿದೆ.

ಸಿಂಗ್ 1991ರಿಂದ-1992ರವರೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 2009ರಲ್ಲಿ ಅವರು ಸಂಸದರಾಗಿ ಆಯ್ಕೆಯಾಗಿದ್ದರು.  2014ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೇರಿದ ಬಳಿಕ ಅವರನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು.

ಸಂವಿಧಾನದ ಹುದ್ದೆಯಲ್ಲಿರುವ ರಾಜ್ಯಪಾಲರು ತಮ್ಮ ಹುದ್ದೆಯ ಘನತೆಯನ್ನು ಮೀರಿ ಒಂದು ಪಕ್ಷದ ಕಾರ್ಯಕರ್ತನಂತೆ ಮಾತನಾಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

1 hour ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

1 hour ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

2 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

2 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

2 hours ago