Featured

ಮೋದಿ ಮನವಿಗೆ ಸಮ್ಮತಿ ನೀಡಿದ ಬ್ರಿಟನ್ ಆಂತರಿಕ ಸಂಸತ್ತು, ವಿಜಯ್ ಮಲ್ಯ ಶೀಘ್ರ ಭಾರತಕ್ಕೆ ಗಡಿಪಾರು.

ಲಂಡನ್: ಬ್ಯಾಂಕ್‍ಗಳಿಂದ ಸಾವಿರಾರು ಕೋಟಿ ರೂ. ಸಾಲ ಪಡೆದು ಮರುಪಾವತಿ ಮಾಡದೇ ಲಂಡನ್‍ನಲ್ಲಿ ತಲೆಮರೆಸಿಕೊಂಡಿದ್ದ ಮದ್ಯದ ದೊರೆ ವಿಜಯ್ ಮಲ್ಯ ಗಡಿಪಾರಿಗೆ ಬ್ರಿಟನ್ ಆಂತರಿಕ ಸಂಸತ್ತು ಒಪ್ಪಿಗೆ ನೀಡಿದೆ.

ಉದ್ಯಮಿ ಮಲ್ಯರನ್ನು ಗಡಿಪಾರು ಮಾಡಲು ಭಾರತ ಸರ್ಕಾರ ಮಾಡಿದ್ದ ಮನವಿಗೆ ಬ್ರಿಟನ್ ಸಚಿವಾಲಯ ಸಮ್ಮತಿಸಿದೆ. ಭಾರತದ ಮನವಿಗೆ ಬ್ರಿಟನ್ ಗೃಹ ಕಾರ್ಯದರ್ಶಿ ಸಜೀದ್ ಜಾವಿದ್ ಫೆಬ್ರವರಿ 3 ರಂದು ಸಹಿ ಹಾಕಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಬ್ರಿಟನ್ ಸರ್ಕಾರದ ಈ ನಿರ್ಣಯದಿಂದ ಮಲ್ಯಗೆ ಭಾರೀ ಹಿನ್ನಡೆ ಆಗಿದೆ.

ಕಳೆದ ವರ್ಷದ ಡಿಸೆಂಬರಿನಲ್ಲಿ ಈ ಕುರಿತು ವಿಚಾರಣೆ ನಡೆಸಿ ತೀರ್ಪು ನೀಡಿದ್ದ ಲಂಡನ್ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ಮಲ್ಯ ಗಡಿಪಾರಿಗೆ ಅನುಮತಿ ನೀಡಿತ್ತು. ಅಲ್ಲದೇ ಗಡಿಪಾರು ಆದೇಶ ನೀಡುವುದರಿಂದ ಮಾನವ ಹಕ್ಕುಗಳ ಉಲ್ಲಂಘನೆ ಆಗುವುದಿಲ್ಲ ಎಂದು ತನ್ನ ತೀರ್ಪಿನಲ್ಲಿ ಉಲ್ಲೇಖಿಸಿತ್ತು. ನ್ಯಾಯಾಲಯದ ತೀರ್ಪಿಗೆ ಸಂಸತ್ ಒಪ್ಪಿಗೆ ಮಾತ್ರ ಬಾಕಿ ಇತ್ತು. ಆದರೆ ಮಲ್ಯ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ ಬ್ಯಾಂಕ್ ಸಾಲ ಮರು ಪಾವತಿ ಮಾಡಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದರು.

ಮುಂದಿನ ನಡೆ ಏನು?
ಮಲ್ಯ ಗಡಿಪಾರಿನ ಕುರಿತು ಲಂಡನ್ ಸಂಸತ್ ಕೈಗೊಂಡಿರುವ ನಿರ್ಣಯದಿಂದ ಭಾರತ ಸರ್ಕಾರಕ್ಕೆ ಮತ್ತೊಂದು ಗೆಲುವು ಸಿಕ್ಕಂತಾಗಿದೆ. ಸದ್ಯ ಲಂಡನ್ ಆಂತರಿಕ ಸಂಸತ್ತಿನ ನಿರ್ಣಯವನ್ನು ಪ್ರಶ್ನಿಸಿ 14 ದಿನಗಳ ಒಳಗೆ ಮೇಲ್ಮನವಿ ಸಲ್ಲಿಸಲು ವಿಜಯ್ ಮಲ್ಯಗೆ ಅವಕಾಶ ಇದೆ.

 

Vishwa News 24

Recent Posts

ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ – vishwanews24

 ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ      ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 minutes ago

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು – vishwanews24

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…

7 minutes ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago