Featured

ಮೋದಿ ಮೇಕಪ್ ,ವ್ಯಾಕ್ಸ್​ , ಮಾಡಿ ತಿರುಗಿದ್ರೆ ನಾನು ದಿನಕ್ಕೊಂದು ಭಾರಿ ಸ್ನಾನ ಮಾಡುವವ: ಕುಮಾರಸ್ವಾಮಿ

ಉಡುಪಿ: ಬಿಜೆಪಿಯವರ ಪ್ರಚಾರಕ್ಕೆ ಮೋದಿಯೇ ಮುಖ. ಅವರು ಇಲ್ಲದಿದ್ದರೆ ದೇಶಕ್ಕೆ ರಕ್ಷಣೆಯೇ ಇಲ್ಲ ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ ಉಡುಪಿ ಮಂಗಳೂರಿನ ಜನರು ತುಂಬ ತಿಳಿವಳಿಕೆ ಇರುವವರು, ನೀವೇಕೆ ಮೋದಿಯನ್ನು ಬೆಂಬಲಿಸುತ್ತೀರಿ ಎಂದು ಎಚ್​.ಡಿ.ಕುಮಾರಸ್ವಾಮಿ ಹೇಳಿದರು.

ಪ್ರಚಾರ ಸಭೆಯಲ್ಲಿ ಮಾತನಾಡಿ, ನಿಮಗೂ ಮೋದಿ ಮುಖವೇ ಇಷ್ಟವಾಗುತ್ತದೆ. ಮೋದಿಯವರು ಬೆಳಗ್ಗೆ ಹೊರಡುವಾಗ ವ್ಯಾಕ್ಸ್​ ಮಾಡಿಸಿಕೊಳ್ಳುತ್ತಾರೆ. ಮುಖ ಪಳಪಳ ಹೊಳೆಯುವಂತೆ ಮಾಡಿಕೊಳ್ಳುತ್ತಾರೆ. ಆದರೆ ನಾವು ಬಿಸಿಲು, ಮಳೆಯಲ್ಲಿ ಓಡಾಡುತ್ತೇವೆ. ಇವತ್ತು ಮುಖ ತೊಳೆದರೆ ಮತ್ತೆ ನಾಳೆನೇ ತೊಳೆಯೋದು. ಹಾಗಾಗಿ ನಾನು ನಿಮಗೆ ಇಷ್ಟವಾಗೋದಿಲ್ಲ, ಮೋದಿಯವರೇ ಇಷ್ಟವಾಗುತ್ತಾರೆ ಎಂದು ವ್ಯಂಗ್ಯವಾಗಿ ಹೇಳಿದರು.

ಇತ್ತೀಚೆಗೆ ಒಂದು ಶೋಕಿ ಶುರುವಾಗಿದೆ. ನಾವೆಲ್ಲ ರಸ್ತೆಯಲ್ಲಿ ಹೋಗುತ್ತಿದ್ದರೆ ಯುವಕರು ಮೋದಿ, ಮೋದಿ ಎಂದು ಕೂಗುತ್ತಾರೆ. ಹಾಗೆ ಕೂಗುವವರಿಗೆ ಮೋದಿ ಏನು ಮಾಡಿದ್ದಾರೆ? ಕರಾವಳಿಯವರ ಬಗ್ಗೆ ನಾನು ಯಾವತ್ತೂ ಲಘುವಾಗಿ ಮಾತನಾಡಿಲ್ಲ. ಈ ಭಾಗದ ಮೂರು ಜಿಲ್ಲೆಗಳ ಜನರು ಉತ್ತಮ ತಿಳಿವಳಿಕೆ ಇರುವವರು. ಯಾಕೆ ಸುಮ್ಮನೆ ಬಿಜೆಪಿಯನ್ನು ಬೆಂಬಲಿಸುತ್ತೀರಿ ಎಂದು ಕೇಳಿದ್ದೇನೆ ಅಷ್ಟೇ ಎಂದರು.

ಊರಿಗೆ ಶಾಲೆ ಬೇಕೆಂದರೆ ಕುಮಾರಸ್ವಾಮಿ ಬೇಕು. ಆದರೆ ವೋಟು ಮೋದಿಗೆ ಹಾಕುತ್ತೇವೆ ಎನ್ನುತ್ತಾರೆ. ಮೋದಿ ಒಬ್ಬರೇನಾ ದೇಶ ರಕ್ಷಣೆ ಮಾಡುವವರು? ವಾಜಪೇಯಿ ಈ ರಾಷ್ಟ್ರಕ್ಕೆ ಭದ್ರತೆ ನೀಡಿಲ್ಲವಾ? ಮಂಗಳೂರು ಮೂಲದ ಸಂಸ್ಥೆಯನ್ನು ದಿವಾಳಿ ಎಬ್ಬಿಸಿದ್ದಾರೆ. ವಿಜಯ ಬ್ಯಾಂಕ್​ನ್ನು ಗುಜರಾತ್​ನ ಬರೋಡಾ ಬ್ಯಾಂಕ್​ಗೆ ವಿಲೀನ ಮಾಡಿದ್ದಾರೆ. ಆದರೆ ವಿಜಯ ಬ್ಯಾಂಕ್​ ಉಳಿವಿಗಾಗಿ ದೇವೇಗೌಡರು ಕೊಡುಗೆ ಕೊಟ್ಟಿದ್ದಾರೆ ಎಂದು ಹೇಳಿದರು.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

8 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

8 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

8 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

9 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

9 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

9 hours ago