ಉಡುಪಿ: ಬಿಜೆಪಿಯವರ ಪ್ರಚಾರಕ್ಕೆ ಮೋದಿಯೇ ಮುಖ. ಅವರು ಇಲ್ಲದಿದ್ದರೆ ದೇಶಕ್ಕೆ ರಕ್ಷಣೆಯೇ ಇಲ್ಲ ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ ಉಡುಪಿ ಮಂಗಳೂರಿನ ಜನರು ತುಂಬ ತಿಳಿವಳಿಕೆ ಇರುವವರು, ನೀವೇಕೆ ಮೋದಿಯನ್ನು ಬೆಂಬಲಿಸುತ್ತೀರಿ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಪ್ರಚಾರ ಸಭೆಯಲ್ಲಿ ಮಾತನಾಡಿ, ನಿಮಗೂ ಮೋದಿ ಮುಖವೇ ಇಷ್ಟವಾಗುತ್ತದೆ. ಮೋದಿಯವರು ಬೆಳಗ್ಗೆ ಹೊರಡುವಾಗ ವ್ಯಾಕ್ಸ್ ಮಾಡಿಸಿಕೊಳ್ಳುತ್ತಾರೆ. ಮುಖ ಪಳಪಳ ಹೊಳೆಯುವಂತೆ ಮಾಡಿಕೊಳ್ಳುತ್ತಾರೆ. ಆದರೆ ನಾವು ಬಿಸಿಲು, ಮಳೆಯಲ್ಲಿ ಓಡಾಡುತ್ತೇವೆ. ಇವತ್ತು ಮುಖ ತೊಳೆದರೆ ಮತ್ತೆ ನಾಳೆನೇ ತೊಳೆಯೋದು. ಹಾಗಾಗಿ ನಾನು ನಿಮಗೆ ಇಷ್ಟವಾಗೋದಿಲ್ಲ, ಮೋದಿಯವರೇ ಇಷ್ಟವಾಗುತ್ತಾರೆ ಎಂದು ವ್ಯಂಗ್ಯವಾಗಿ ಹೇಳಿದರು.
ಇತ್ತೀಚೆಗೆ ಒಂದು ಶೋಕಿ ಶುರುವಾಗಿದೆ. ನಾವೆಲ್ಲ ರಸ್ತೆಯಲ್ಲಿ ಹೋಗುತ್ತಿದ್ದರೆ ಯುವಕರು ಮೋದಿ, ಮೋದಿ ಎಂದು ಕೂಗುತ್ತಾರೆ. ಹಾಗೆ ಕೂಗುವವರಿಗೆ ಮೋದಿ ಏನು ಮಾಡಿದ್ದಾರೆ? ಕರಾವಳಿಯವರ ಬಗ್ಗೆ ನಾನು ಯಾವತ್ತೂ ಲಘುವಾಗಿ ಮಾತನಾಡಿಲ್ಲ. ಈ ಭಾಗದ ಮೂರು ಜಿಲ್ಲೆಗಳ ಜನರು ಉತ್ತಮ ತಿಳಿವಳಿಕೆ ಇರುವವರು. ಯಾಕೆ ಸುಮ್ಮನೆ ಬಿಜೆಪಿಯನ್ನು ಬೆಂಬಲಿಸುತ್ತೀರಿ ಎಂದು ಕೇಳಿದ್ದೇನೆ ಅಷ್ಟೇ ಎಂದರು.
ಊರಿಗೆ ಶಾಲೆ ಬೇಕೆಂದರೆ ಕುಮಾರಸ್ವಾಮಿ ಬೇಕು. ಆದರೆ ವೋಟು ಮೋದಿಗೆ ಹಾಕುತ್ತೇವೆ ಎನ್ನುತ್ತಾರೆ. ಮೋದಿ ಒಬ್ಬರೇನಾ ದೇಶ ರಕ್ಷಣೆ ಮಾಡುವವರು? ವಾಜಪೇಯಿ ಈ ರಾಷ್ಟ್ರಕ್ಕೆ ಭದ್ರತೆ ನೀಡಿಲ್ಲವಾ? ಮಂಗಳೂರು ಮೂಲದ ಸಂಸ್ಥೆಯನ್ನು ದಿವಾಳಿ ಎಬ್ಬಿಸಿದ್ದಾರೆ. ವಿಜಯ ಬ್ಯಾಂಕ್ನ್ನು ಗುಜರಾತ್ನ ಬರೋಡಾ ಬ್ಯಾಂಕ್ಗೆ ವಿಲೀನ ಮಾಡಿದ್ದಾರೆ. ಆದರೆ ವಿಜಯ ಬ್ಯಾಂಕ್ ಉಳಿವಿಗಾಗಿ ದೇವೇಗೌಡರು ಕೊಡುಗೆ ಕೊಟ್ಟಿದ್ದಾರೆ ಎಂದು ಹೇಳಿದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…