ಉಡುಪಿ: ಬಿಜೆಪಿಯವರ ಪ್ರಚಾರಕ್ಕೆ ಮೋದಿಯೇ ಮುಖ. ಅವರು ಇಲ್ಲದಿದ್ದರೆ ದೇಶಕ್ಕೆ ರಕ್ಷಣೆಯೇ ಇಲ್ಲ ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ ಉಡುಪಿ ಮಂಗಳೂರಿನ ಜನರು ತುಂಬ ತಿಳಿವಳಿಕೆ ಇರುವವರು, ನೀವೇಕೆ ಮೋದಿಯನ್ನು ಬೆಂಬಲಿಸುತ್ತೀರಿ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಪ್ರಚಾರ ಸಭೆಯಲ್ಲಿ ಮಾತನಾಡಿ, ನಿಮಗೂ ಮೋದಿ ಮುಖವೇ ಇಷ್ಟವಾಗುತ್ತದೆ. ಮೋದಿಯವರು ಬೆಳಗ್ಗೆ ಹೊರಡುವಾಗ ವ್ಯಾಕ್ಸ್ ಮಾಡಿಸಿಕೊಳ್ಳುತ್ತಾರೆ. ಮುಖ ಪಳಪಳ ಹೊಳೆಯುವಂತೆ ಮಾಡಿಕೊಳ್ಳುತ್ತಾರೆ. ಆದರೆ ನಾವು ಬಿಸಿಲು, ಮಳೆಯಲ್ಲಿ ಓಡಾಡುತ್ತೇವೆ. ಇವತ್ತು ಮುಖ ತೊಳೆದರೆ ಮತ್ತೆ ನಾಳೆನೇ ತೊಳೆಯೋದು. ಹಾಗಾಗಿ ನಾನು ನಿಮಗೆ ಇಷ್ಟವಾಗೋದಿಲ್ಲ, ಮೋದಿಯವರೇ ಇಷ್ಟವಾಗುತ್ತಾರೆ ಎಂದು ವ್ಯಂಗ್ಯವಾಗಿ ಹೇಳಿದರು.
ಇತ್ತೀಚೆಗೆ ಒಂದು ಶೋಕಿ ಶುರುವಾಗಿದೆ. ನಾವೆಲ್ಲ ರಸ್ತೆಯಲ್ಲಿ ಹೋಗುತ್ತಿದ್ದರೆ ಯುವಕರು ಮೋದಿ, ಮೋದಿ ಎಂದು ಕೂಗುತ್ತಾರೆ. ಹಾಗೆ ಕೂಗುವವರಿಗೆ ಮೋದಿ ಏನು ಮಾಡಿದ್ದಾರೆ? ಕರಾವಳಿಯವರ ಬಗ್ಗೆ ನಾನು ಯಾವತ್ತೂ ಲಘುವಾಗಿ ಮಾತನಾಡಿಲ್ಲ. ಈ ಭಾಗದ ಮೂರು ಜಿಲ್ಲೆಗಳ ಜನರು ಉತ್ತಮ ತಿಳಿವಳಿಕೆ ಇರುವವರು. ಯಾಕೆ ಸುಮ್ಮನೆ ಬಿಜೆಪಿಯನ್ನು ಬೆಂಬಲಿಸುತ್ತೀರಿ ಎಂದು ಕೇಳಿದ್ದೇನೆ ಅಷ್ಟೇ ಎಂದರು.
ಊರಿಗೆ ಶಾಲೆ ಬೇಕೆಂದರೆ ಕುಮಾರಸ್ವಾಮಿ ಬೇಕು. ಆದರೆ ವೋಟು ಮೋದಿಗೆ ಹಾಕುತ್ತೇವೆ ಎನ್ನುತ್ತಾರೆ. ಮೋದಿ ಒಬ್ಬರೇನಾ ದೇಶ ರಕ್ಷಣೆ ಮಾಡುವವರು? ವಾಜಪೇಯಿ ಈ ರಾಷ್ಟ್ರಕ್ಕೆ ಭದ್ರತೆ ನೀಡಿಲ್ಲವಾ? ಮಂಗಳೂರು ಮೂಲದ ಸಂಸ್ಥೆಯನ್ನು ದಿವಾಳಿ ಎಬ್ಬಿಸಿದ್ದಾರೆ. ವಿಜಯ ಬ್ಯಾಂಕ್ನ್ನು ಗುಜರಾತ್ನ ಬರೋಡಾ ಬ್ಯಾಂಕ್ಗೆ ವಿಲೀನ ಮಾಡಿದ್ದಾರೆ. ಆದರೆ ವಿಜಯ ಬ್ಯಾಂಕ್ ಉಳಿವಿಗಾಗಿ ದೇವೇಗೌಡರು ಕೊಡುಗೆ ಕೊಟ್ಟಿದ್ದಾರೆ ಎಂದು ಹೇಳಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…