ಉಡುಪಿ: ಬಿಜೆಪಿಯವರ ಪ್ರಚಾರಕ್ಕೆ ಮೋದಿಯೇ ಮುಖ. ಅವರು ಇಲ್ಲದಿದ್ದರೆ ದೇಶಕ್ಕೆ ರಕ್ಷಣೆಯೇ ಇಲ್ಲ ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ ಉಡುಪಿ ಮಂಗಳೂರಿನ ಜನರು ತುಂಬ ತಿಳಿವಳಿಕೆ ಇರುವವರು, ನೀವೇಕೆ ಮೋದಿಯನ್ನು ಬೆಂಬಲಿಸುತ್ತೀರಿ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಪ್ರಚಾರ ಸಭೆಯಲ್ಲಿ ಮಾತನಾಡಿ, ನಿಮಗೂ ಮೋದಿ ಮುಖವೇ ಇಷ್ಟವಾಗುತ್ತದೆ. ಮೋದಿಯವರು ಬೆಳಗ್ಗೆ ಹೊರಡುವಾಗ ವ್ಯಾಕ್ಸ್ ಮಾಡಿಸಿಕೊಳ್ಳುತ್ತಾರೆ. ಮುಖ ಪಳಪಳ ಹೊಳೆಯುವಂತೆ ಮಾಡಿಕೊಳ್ಳುತ್ತಾರೆ. ಆದರೆ ನಾವು ಬಿಸಿಲು, ಮಳೆಯಲ್ಲಿ ಓಡಾಡುತ್ತೇವೆ. ಇವತ್ತು ಮುಖ ತೊಳೆದರೆ ಮತ್ತೆ ನಾಳೆನೇ ತೊಳೆಯೋದು. ಹಾಗಾಗಿ ನಾನು ನಿಮಗೆ ಇಷ್ಟವಾಗೋದಿಲ್ಲ, ಮೋದಿಯವರೇ ಇಷ್ಟವಾಗುತ್ತಾರೆ ಎಂದು ವ್ಯಂಗ್ಯವಾಗಿ ಹೇಳಿದರು.
ಇತ್ತೀಚೆಗೆ ಒಂದು ಶೋಕಿ ಶುರುವಾಗಿದೆ. ನಾವೆಲ್ಲ ರಸ್ತೆಯಲ್ಲಿ ಹೋಗುತ್ತಿದ್ದರೆ ಯುವಕರು ಮೋದಿ, ಮೋದಿ ಎಂದು ಕೂಗುತ್ತಾರೆ. ಹಾಗೆ ಕೂಗುವವರಿಗೆ ಮೋದಿ ಏನು ಮಾಡಿದ್ದಾರೆ? ಕರಾವಳಿಯವರ ಬಗ್ಗೆ ನಾನು ಯಾವತ್ತೂ ಲಘುವಾಗಿ ಮಾತನಾಡಿಲ್ಲ. ಈ ಭಾಗದ ಮೂರು ಜಿಲ್ಲೆಗಳ ಜನರು ಉತ್ತಮ ತಿಳಿವಳಿಕೆ ಇರುವವರು. ಯಾಕೆ ಸುಮ್ಮನೆ ಬಿಜೆಪಿಯನ್ನು ಬೆಂಬಲಿಸುತ್ತೀರಿ ಎಂದು ಕೇಳಿದ್ದೇನೆ ಅಷ್ಟೇ ಎಂದರು.
ಊರಿಗೆ ಶಾಲೆ ಬೇಕೆಂದರೆ ಕುಮಾರಸ್ವಾಮಿ ಬೇಕು. ಆದರೆ ವೋಟು ಮೋದಿಗೆ ಹಾಕುತ್ತೇವೆ ಎನ್ನುತ್ತಾರೆ. ಮೋದಿ ಒಬ್ಬರೇನಾ ದೇಶ ರಕ್ಷಣೆ ಮಾಡುವವರು? ವಾಜಪೇಯಿ ಈ ರಾಷ್ಟ್ರಕ್ಕೆ ಭದ್ರತೆ ನೀಡಿಲ್ಲವಾ? ಮಂಗಳೂರು ಮೂಲದ ಸಂಸ್ಥೆಯನ್ನು ದಿವಾಳಿ ಎಬ್ಬಿಸಿದ್ದಾರೆ. ವಿಜಯ ಬ್ಯಾಂಕ್ನ್ನು ಗುಜರಾತ್ನ ಬರೋಡಾ ಬ್ಯಾಂಕ್ಗೆ ವಿಲೀನ ಮಾಡಿದ್ದಾರೆ. ಆದರೆ ವಿಜಯ ಬ್ಯಾಂಕ್ ಉಳಿವಿಗಾಗಿ ದೇವೇಗೌಡರು ಕೊಡುಗೆ ಕೊಟ್ಟಿದ್ದಾರೆ ಎಂದು ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…