ಉಡುಪಿ

ಮೋದಿ ಸಮಾವೇಶಕ್ಕೆ ಲಕ್ಷ ಮಂದಿ’

ಉಡುಪಿ: ಎಂಜಿಎಂ ಮೈದಾನದಲ್ಲಿ ಮೇ 1ರಂದು ಜರಗಲಿರುವ ಪ್ರಧಾನಿ ಮೋದಿ ಅವರ ಸಾರ್ವಜನಿಕ ಸಮಾವೇಶದಲ್ಲಿ ಒಂದು ಲಕ್ಷ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.

ಮೋದಿಯವರು ಮೇ 1ರಂದು ಮಂಗಳೂರಿನಿಂದ ಆದಿ ಉಡುಪಿ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಅಲ್ಲಿಂದ ಶ್ರೀಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಪಡೆದು ಪೇಜಾವರ ಶ್ರೀಪಾದರು ಮತ್ತು ಪರ್ಯಾಯ ಪಲಿಮಾರು ಶ್ರೀಪಾದರನ್ನು ಭೇಟಿಯಾಗಲಿದ್ದಾರೆ. ಸಭೆಯಲ್ಲಿ ಒಟ್ಟು 20 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು, ಮುಖಂಡರು ಪಾಲ್ಗೊಳ್ಳಲಿದ್ದಾರೆ. ರಾಜ್ಯದಲ್ಲಿ ಪ್ರತಿ 20 ಕ್ಷೇತ್ರಗಳಿಗೆ ಒಂದು ಕಡೆಯಂತೆ ಸುಮಾರು 20 ಸಭೆಗಳಲ್ಲಿ ಮೋದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಪ್ರಧಾನಿಯಾದ ಅನಂತರ ನರೇಂದ್ರ ಮೋದಿ ಉಡುಪಿಗೆ ಆಗಮಿಸ ಬೇಕೆಂಬುದು ಪೇಜಾವರ ಶ್ರೀಗಳು, ಉಡಪಿ ಜನತೆಯ ಆಶಯವಾಗಿತ್ತು. ಅದು ಈಗ ಈಡೇರುತ್ತಿದೆ. ಇದೊಂದು ಅವಿಸ್ಮರಣೀಯ ಕಾರ್ಯಕ್ರಮವಾಗಲಿದೆ ಎಂದು ಮಟ್ಟಾರು ಹೇಳಿದರು.

ಜಿಲ್ಲೆಯ 5 ಕ್ಷೇತ್ರಗಳಲ್ಲಿಯೂ ನಿರೀಕ್ಷೆಯಂತೆಯೇ ಅಭ್ಯರ್ಥಿಗಳ ಆಯ್ಕೆ ನಡೆದಿದೆ. ಹಾಗಾಗಿ ಗೊಂದಲಗಳಿಗೆ ಅವಕಾಶವಿಲ್ಲ. ಎಲ್ಲರೂ ಒಂದಾಗಿ ಗೆಲುವಿಗೆ ಶ್ರಮಿಸುತ್ತಿದ್ದೇವೆ. ಅಭ್ಯರ್ಥಿತ್ವ ಬಯಸುವುದರಲ್ಲಿ ತಪ್ಪಿಲ್ಲ. ಅಭ್ಯರ್ಥಿಗಳ ಘೋಷಣೆಯಾದ ಅನಂತರ ಯಾರೂ ಪ್ರತಿರೋಧ ತೋರಿಸಿಲ್ಲ ಎಂದು ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಹೆಗ್ಡೆ ಅವರು, “ಶೀರೂರು ಶ್ರೀಗಳನ್ನು ಶನಿವಾರ ಭೇಟಿಯಾಗಿದ್ದೇನೆ. ಅವರು ನಾಮಪತ್ರ ವಾಪಸು ಪಡೆಯುವರೆಂಬ ವಿಶ್ವಾಸವಿದೆ. ಮೋದಿ ಪರವಾಗಿ ನಾವು ಅವರ ಜತೆ ಮಾತನಾಡುತ್ತೇವೆ. ಸದ್ಯ ಶ್ರೀಗಳಿಗೆ ಅನಾರೋಗ್ಯವಿದೆ, ಗುಣಮುಖವಾಗಲಿ ಎಂದು ಹಾರೈಸುತ್ತೇನೆ’ ಎಂದರು.

ಕುಂದಾಪುರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಟಿಕೆಟ್‌ ನೀಡಿರುವುದಕ್ಕೆ ಅಸಮಾಧಾನ ಗೊಂಡಿರುವ ಕೆಲವು ಪದಾಧಿಕಾರಿಗಳ ಜತೆಗೆ ನಾನು ಮತ್ತು ಜಯಪ್ರಕಾಶ್‌ ಹೆಗ್ಡೆ ಮಾತುಕತೆ ನಡೆಸಿದ್ದೇವೆ. ಗೊಂದಲ ಪರಿಹಾರವಾಗಿದೆ ಎಂದು ಜಿಲ್ಲಾ ಚುನಾವಣಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಜಿಲ್ಲಾ ಪ್ರ. ಕಾರ್ಯದರ್ಶಿ ಯಶ್‌ಪಾಲ್‌ ಸುವರ್ಣ, ಉಡುಪಿ ಕ್ಷೇತ್ರ ಉಸ್ತುವಾರಿ ಪ್ರವೀಣ್‌ ಕುಮಾರ್‌ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ವಕ್ತಾರ ಕಟಪಾಡಿ ಶಂಕರ ಪೂಜಾರಿ, ಕೋಶಾಧಿಕಾರಿ ರವಿ ಅಮೀನ್‌ ಉಪಸ್ಥಿತರಿದ್ದರು.

ಇಂದು ಕಾರ್ಕಳ, ಉಡುಪಿಗೆ ರಾಜನಾಥ್‌ ಸಿಂಗ್‌
ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ಎ. 23ರಂದು 11.40ಕ್ಕೆ ಕಾರ್ಕಳಕ್ಕೆ ಆಗಮಿಸಿ ಕುಕ್ಕುಂದೂರಿನಲ್ಲಿ ತಾಲೂಕು ಕಚೇರಿ ಸಮೀಪ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿಂದ ಬೆಳ್ತಂಗಡಿಗೆ ತೆರಳಿ 3 ಗಂಟೆಗೆ ಆದಿ ಉಡುಪಿ ಹೆಲಿಪ್ಯಾಡ್‌ಗೆ ಆಗಮಿಸುತ್ತಾರೆ. ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೇಜಾವರ ಶ್ರೀಗಳು ಮತ್ತು ಪರ್ಯಾಯ ಶ್ರೀಗಳನ್ನು ಭೇಟಿ ಯಾಗಲಿದ್ದಾರೆ. ಬಳಿಕ 3.45ರ ವೇಳೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. 4.15ರ ವೇಳೆಗೆ ಮಣಿ ಪಾಲದ ಕಂಟ್ರಿ ಇನ್‌ ಹೊಟೇಲ್‌ ನಲ್ಲಿ ಚಿಂತಕ ರೊಂದಿಗೆ ಸಂವಾದದಲ್ಲಿ ಪಾಲ್ಗೊಳ್ಳ ಲಿದ್ದಾರೆ ಎಂದು ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದರು.

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

17 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago