ಲಂಡನ್: ಯುಪಿಎ ಅವಧಿಯಲ್ಲಿ ಬ್ಯಾಂಕ್ಗಳಿಗೆ 9 ಸಾವಿರ ಕೋಟಿ ರೂ. ವಂಚಿಸಿ ಪರಾರಿಯಾದ ಉದ್ಯಮಿ ವಿಜಯ ಮಲ್ಯರನ್ನು ಗಡೀಪಾರು ಮಾಡುವಂತೆ ಲಂಡನ್ನ ವೆಸ್ಟ್ಮಿನಿಸ್ಟರ್ ಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ. 2019ರ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ ಇದೊಂದು ಮಹತ್ವದ ರಾಜತಾಂತ್ರಿಕ ವಿಜಯವೇ ಆಗಿದೆ.
ಭಾರತದ ಬ್ಯಾಂಕ್ಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಸಾಲ ಪಡೆದು ಪರಾರಿಯಾಗಿದ್ದ ಮದ್ಯ ದೊರೆ ವಿಜಯ್ ಮಲ್ಯ ಅವರನ್ನು ಹಸ್ತಾಂತರ ಮಾಡಬೇಕೆಂದು ಭಾರತ ಲಂಡನ್ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿತ್ತು.
ಕೋರ್ಟ್ ತೀರ್ಪು
2016ರಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳಿಗೆ ವಂಚಿಸಿ ಲಂಡನ್ಗೆ ಮಲ್ಯ ಪರಾರಿಯಾದ ಬಳಿಕ ಮೋದಿ ನೇತೃತ್ವದ ಸರಕಾರದ ವಿರುದ್ಧ ಪ್ರತಿಪಕ್ಷಗಳು ನಡೆಸುತ್ತಿದ್ದ ನಿರಂತರ ಟೀಕಾ ಪ್ರಹಾರಕ್ಕೆ ಸೋಮವಾರ ಪೂರ್ಣ ವಿರಾಮ ಸಿಕ್ಕಿದಂತಾಗಿದೆ. ಸಿಬಿಐ, ಇತರ ತನಿಖಾ ಸಂಸ್ಥೆಗಳು, ಖುದ್ದು ಪ್ರಧಾನಿ ನರೇಂದ್ರ ಮೋದಿ ಹಲವು ಹಂತದಲ್ಲಿ ಬ್ರಿಟನ್ ಸರಕಾರದ ಜತೆ ಮಾತುಕತೆ ನಡೆಸಿದ್ದು ಪರಿಣಾಮ ಬೀರಿದೆ.
ವೆಸ್ಟ್ಮಿನಿಸ್ಟರ್ನಲ್ಲಿರುವ ಮ್ಯಾಜಿಸ್ಟ್ರೇಟ್ ಕೋರ್ಟ್ನ ನ್ಯಾಯಾಧೀಶೆ ತೀರ್ಪು ನೀಡಿ, ಮಲ್ಯ ಪ್ರತಿಪಾದಿಸಿದ್ದಂತೆ ಭಾರತದ ಅಧಿಕಾರಿಗಳು ಪೂರ್ವಗ್ರಹ ಪೀಡಿತರಾಗಿ ಅವರ ಮೇಲೆ ಕೇಸು ದಾಖಲಿಸಿಲ್ಲ. ಎಲ್ಲ ಸಾಕ್ಷ್ಯಗಳನ್ನು ಪರಿಶೀಲಿಸಲಾಗಿದೆ ಎಂದು 62 ಪುಟಗಳ ತೀರ್ಪಿನಲ್ಲಿ ಉಲ್ಲೇಖೀಸಿದ್ದಾರೆ. ಮಲ್ಯರ ಸಂಸ್ಥೆಗೆ ಯಾವ ರೀತಿಯಲ್ಲಿ ಸಾಲ ನೀಡಲಾಯಿತು ಮತ್ತು ಅದರ ಉಪಯೋಗ ಯಾವ ರೀತಿ ನಡೆಯಿತು ಎಂಬುದೇ ಪ್ರಶ್ನಾರ್ಹ ಎಂದು ಎಮ್ಮಾ ಅಭಿಪ್ರಾಯಪಟ್ಟಿದ್ದಾರೆ.
ಭಾರತಕ್ಕೆ ಗಡೀಪಾರಾದರೆ ಮಲ್ಯರ ಮಾನವ ಹಕ್ಕುಗಳಿಗೆ ತೊಂದರೆಯಾಗುವುದಿಲ್ಲ ಎಂದಿದ್ದಾರೆ. ಇದರ ಜತೆಗೆ ಅವರ ಹಣಕಾಸಿನ ವ್ಯವಹಾರಗಳಲ್ಲಿಯೂ ಕೂಡ ಪ್ರಶ್ನಾರ್ಹವಾದ ಅಂಶಗಳು ಇದ್ದವು ಎಂದು ತೀರ್ಪಿನಲ್ಲಿ ಹೇಳಿದ್ದಾರೆ. “ಮಧುಮೇಹ ಮತ್ತು ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಅವರಿಗೆ ವೈಯಕ್ತಿಕ ವೈದ್ಯಕೀಯ ವ್ಯವಸ್ಥೆಗಳನ್ನು ಪೂರೈಸಲು ಅವಕಾಶ ನೀಡಲಾಗಿದೆ. ಜೈಲಿನಲ್ಲಿ ಯಾವುದೇ ರೀತಿಯ ಅಭದ್ರತೆ ಉಂಟಾದೀತು’ ಎಂಬ ವಾದಕ್ಕೆ ಅವಕಾಶವೇ ಇಲ್ಲ ಎಂದು ನ್ಯಾಯಾಧೀಶೆ ಹೇಳಿದ್ದಾರೆ.
ಲಂಡನ್ ಕೋರ್ಟ್ನಲ್ಲಿ ಸೊಮವಾರ ಭಾರತಕ್ಕೆ ಗಡಿಪಾರು ಮಾಡುವಂತೆ ತೀರ್ಪು ಪ್ರಕಟವಾಗಿದ್ದು. ನಂತರ ಮಲ್ಯ ಬಂಧನಕ್ಕೀಡಾಗಲಿದ್ದಾರೆ. ಮುಂಬಯಿನ ಅರ್ಥರ್ ರಸ್ತೆಯ ಜೈಲಿನ 12ನೇ ಬರಾಕ್ನಲ್ಲಿ ಮಲ್ಯ ಸೆರೆವಾಸದಲ್ಲಿರಬೇಕಾಗುತ್ತದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…