Featured

ಮೋದಿ ಸರಕಾರಕ್ಕೆ ಮತ್ತೊಂದು ಜಯ ; ವಿಜಯ ಮಲ್ಯ ಗಡಿಪಾರು..ಭಾರತಕ್ಕೆ ಒಪ್ಪಿಸಲು ಬ್ರಿಟನ್ ಕೋರ್ಟ್ ಆದೇಶ..

ಲಂಡನ್‌: ಯುಪಿಎ ಅವಧಿಯಲ್ಲಿ ಬ್ಯಾಂಕ್‌ಗಳಿಗೆ 9 ಸಾವಿರ ಕೋಟಿ ರೂ. ವಂಚಿಸಿ ಪರಾರಿಯಾದ ಉದ್ಯಮಿ ವಿಜಯ ಮಲ್ಯರನ್ನು ಗಡೀಪಾರು ಮಾಡುವಂತೆ ಲಂಡನ್‌ನ ವೆಸ್ಟ್‌ಮಿನಿಸ್ಟರ್‌ ಕೋರ್ಟ್‌ ಸೋಮವಾರ ಆದೇಶ ಹೊರಡಿಸಿದೆ. 2019ರ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ ಇದೊಂದು ಮಹತ್ವದ ರಾಜತಾಂತ್ರಿಕ ವಿಜಯವೇ ಆಗಿದೆ.

ಭಾರತದ ಬ್ಯಾಂಕ್‌ಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಸಾಲ ಪಡೆದು ಪರಾರಿಯಾಗಿದ್ದ ಮದ್ಯ ದೊರೆ ವಿಜಯ್‌ ಮಲ್ಯ ಅವರನ್ನು ಹಸ್ತಾಂತರ ಮಾಡಬೇಕೆಂದು ಭಾರತ ಲಂಡನ್‌ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿತ್ತು.

ಕೋರ್ಟ್‌ ತೀರ್ಪು
2016ರಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ವಂಚಿಸಿ ಲಂಡನ್‌ಗೆ ಮಲ್ಯ ಪರಾರಿಯಾದ ಬಳಿಕ ಮೋದಿ ನೇತೃತ್ವದ ಸರಕಾರದ ವಿರುದ್ಧ ಪ್ರತಿಪಕ್ಷಗಳು ನಡೆಸುತ್ತಿದ್ದ ನಿರಂತರ ಟೀಕಾ ಪ್ರಹಾರಕ್ಕೆ ಸೋಮವಾರ ಪೂರ್ಣ ವಿರಾಮ ಸಿಕ್ಕಿದಂತಾಗಿದೆ. ಸಿಬಿಐ, ಇತರ ತನಿಖಾ ಸಂಸ್ಥೆಗಳು, ಖುದ್ದು ಪ್ರಧಾನಿ ನರೇಂದ್ರ ಮೋದಿ ಹಲವು ಹಂತದಲ್ಲಿ ಬ್ರಿಟನ್‌ ಸರಕಾರದ ಜತೆ ಮಾತುಕತೆ ನಡೆಸಿದ್ದು ಪರಿಣಾಮ ಬೀರಿದೆ.

ವೆಸ್ಟ್‌ಮಿನಿಸ್ಟರ್‌ನಲ್ಲಿರುವ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನ ನ್ಯಾಯಾಧೀಶೆ ತೀರ್ಪು ನೀಡಿ, ಮಲ್ಯ ಪ್ರತಿಪಾದಿಸಿದ್ದಂತೆ ಭಾರತದ ಅಧಿಕಾರಿಗಳು ಪೂರ್ವಗ್ರಹ ಪೀಡಿತರಾಗಿ ಅವರ ಮೇಲೆ ಕೇಸು ದಾಖಲಿಸಿಲ್ಲ. ಎಲ್ಲ ಸಾಕ್ಷ್ಯಗಳನ್ನು ಪರಿಶೀಲಿಸಲಾಗಿದೆ ಎಂದು 62 ಪುಟಗಳ ತೀರ್ಪಿನಲ್ಲಿ ಉಲ್ಲೇಖೀಸಿದ್ದಾರೆ. ಮಲ್ಯರ ಸಂಸ್ಥೆಗೆ ಯಾವ ರೀತಿಯಲ್ಲಿ ಸಾಲ ನೀಡಲಾಯಿತು ಮತ್ತು ಅದರ ಉಪಯೋಗ ಯಾವ ರೀತಿ ನಡೆಯಿತು ಎಂಬುದೇ ಪ್ರಶ್ನಾರ್ಹ ಎಂದು ಎಮ್ಮಾ ಅಭಿಪ್ರಾಯಪಟ್ಟಿದ್ದಾರೆ.

ಭಾರತಕ್ಕೆ ಗಡೀಪಾರಾದರೆ ಮಲ್ಯರ ಮಾನವ ಹಕ್ಕುಗಳಿಗೆ ತೊಂದರೆಯಾಗುವುದಿಲ್ಲ ಎಂದಿದ್ದಾರೆ. ಇದರ ಜತೆಗೆ ಅವರ ಹಣಕಾಸಿನ ವ್ಯವಹಾರಗಳಲ್ಲಿಯೂ ಕೂಡ ಪ್ರಶ್ನಾರ್ಹವಾದ ಅಂಶಗಳು ಇದ್ದವು ಎಂದು ತೀರ್ಪಿನಲ್ಲಿ ಹೇಳಿದ್ದಾರೆ. “ಮಧುಮೇಹ ಮತ್ತು ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಅವರಿಗೆ ವೈಯಕ್ತಿಕ ವೈದ್ಯಕೀಯ ವ್ಯವಸ್ಥೆಗಳನ್ನು ಪೂರೈಸಲು ಅವಕಾಶ ನೀಡಲಾಗಿದೆ. ಜೈಲಿನಲ್ಲಿ ಯಾವುದೇ ರೀತಿಯ ಅಭದ್ರತೆ ಉಂಟಾದೀತು’ ಎಂಬ ವಾದಕ್ಕೆ ಅವಕಾಶವೇ ಇಲ್ಲ ಎಂದು ನ್ಯಾಯಾಧೀಶೆ ಹೇಳಿದ್ದಾರೆ.

ಲಂಡನ್‌ ಕೋರ್ಟ್‌ನಲ್ಲಿ ಸೊಮವಾರ ಭಾರತಕ್ಕೆ ಗಡಿಪಾರು ಮಾಡುವಂತೆ ತೀರ್ಪು ಪ್ರಕಟವಾಗಿದ್ದು. ನಂತರ ಮಲ್ಯ ಬಂಧನಕ್ಕೀಡಾಗಲಿದ್ದಾರೆ. ಮುಂಬಯಿನ ಅರ್ಥರ್‌ ರಸ್ತೆಯ ಜೈಲಿನ 12ನೇ ಬರಾಕ್‌ನಲ್ಲಿ ಮಲ್ಯ ಸೆರೆವಾಸದಲ್ಲಿರಬೇಕಾಗುತ್ತದೆ.

Vishwa News 24

Recent Posts

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

46 minutes ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

55 minutes ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 hour ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

1 hour ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

1 hour ago

ಹಿಜಾಬ್‌ಗೆ ಅನುಮತಿ : ಸಾಮಾಜಿಕ ಸಾಮರಸ್ಯವನ್ನು ಕದಡುವುದೇ ಸಿದ್ದರಾಮಯ್ಯ ಸರ್ಕಾರದ ಕಸುಬಾಗಿ ಬಿಟ್ಟಿದೆ : ಸುನಿಲ್ ಕುಮಾರ್ ಆಕ್ರೋಶ – vishwanews24

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್ ಕಾರ್ಕಳ:…

1 hour ago