Featured

ಮೋದಿ ಸರಕಾರಕ್ಕೆ ಮತ್ತೊಂದು ಜಯ ; ವಿಜಯ ಮಲ್ಯ ಗಡಿಪಾರು..ಭಾರತಕ್ಕೆ ಒಪ್ಪಿಸಲು ಬ್ರಿಟನ್ ಕೋರ್ಟ್ ಆದೇಶ..

ಲಂಡನ್‌: ಯುಪಿಎ ಅವಧಿಯಲ್ಲಿ ಬ್ಯಾಂಕ್‌ಗಳಿಗೆ 9 ಸಾವಿರ ಕೋಟಿ ರೂ. ವಂಚಿಸಿ ಪರಾರಿಯಾದ ಉದ್ಯಮಿ ವಿಜಯ ಮಲ್ಯರನ್ನು ಗಡೀಪಾರು ಮಾಡುವಂತೆ ಲಂಡನ್‌ನ ವೆಸ್ಟ್‌ಮಿನಿಸ್ಟರ್‌ ಕೋರ್ಟ್‌ ಸೋಮವಾರ ಆದೇಶ ಹೊರಡಿಸಿದೆ. 2019ರ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ ಇದೊಂದು ಮಹತ್ವದ ರಾಜತಾಂತ್ರಿಕ ವಿಜಯವೇ ಆಗಿದೆ.

ಭಾರತದ ಬ್ಯಾಂಕ್‌ಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಸಾಲ ಪಡೆದು ಪರಾರಿಯಾಗಿದ್ದ ಮದ್ಯ ದೊರೆ ವಿಜಯ್‌ ಮಲ್ಯ ಅವರನ್ನು ಹಸ್ತಾಂತರ ಮಾಡಬೇಕೆಂದು ಭಾರತ ಲಂಡನ್‌ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿತ್ತು.

ಕೋರ್ಟ್‌ ತೀರ್ಪು
2016ರಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ವಂಚಿಸಿ ಲಂಡನ್‌ಗೆ ಮಲ್ಯ ಪರಾರಿಯಾದ ಬಳಿಕ ಮೋದಿ ನೇತೃತ್ವದ ಸರಕಾರದ ವಿರುದ್ಧ ಪ್ರತಿಪಕ್ಷಗಳು ನಡೆಸುತ್ತಿದ್ದ ನಿರಂತರ ಟೀಕಾ ಪ್ರಹಾರಕ್ಕೆ ಸೋಮವಾರ ಪೂರ್ಣ ವಿರಾಮ ಸಿಕ್ಕಿದಂತಾಗಿದೆ. ಸಿಬಿಐ, ಇತರ ತನಿಖಾ ಸಂಸ್ಥೆಗಳು, ಖುದ್ದು ಪ್ರಧಾನಿ ನರೇಂದ್ರ ಮೋದಿ ಹಲವು ಹಂತದಲ್ಲಿ ಬ್ರಿಟನ್‌ ಸರಕಾರದ ಜತೆ ಮಾತುಕತೆ ನಡೆಸಿದ್ದು ಪರಿಣಾಮ ಬೀರಿದೆ.

ವೆಸ್ಟ್‌ಮಿನಿಸ್ಟರ್‌ನಲ್ಲಿರುವ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನ ನ್ಯಾಯಾಧೀಶೆ ತೀರ್ಪು ನೀಡಿ, ಮಲ್ಯ ಪ್ರತಿಪಾದಿಸಿದ್ದಂತೆ ಭಾರತದ ಅಧಿಕಾರಿಗಳು ಪೂರ್ವಗ್ರಹ ಪೀಡಿತರಾಗಿ ಅವರ ಮೇಲೆ ಕೇಸು ದಾಖಲಿಸಿಲ್ಲ. ಎಲ್ಲ ಸಾಕ್ಷ್ಯಗಳನ್ನು ಪರಿಶೀಲಿಸಲಾಗಿದೆ ಎಂದು 62 ಪುಟಗಳ ತೀರ್ಪಿನಲ್ಲಿ ಉಲ್ಲೇಖೀಸಿದ್ದಾರೆ. ಮಲ್ಯರ ಸಂಸ್ಥೆಗೆ ಯಾವ ರೀತಿಯಲ್ಲಿ ಸಾಲ ನೀಡಲಾಯಿತು ಮತ್ತು ಅದರ ಉಪಯೋಗ ಯಾವ ರೀತಿ ನಡೆಯಿತು ಎಂಬುದೇ ಪ್ರಶ್ನಾರ್ಹ ಎಂದು ಎಮ್ಮಾ ಅಭಿಪ್ರಾಯಪಟ್ಟಿದ್ದಾರೆ.

ಭಾರತಕ್ಕೆ ಗಡೀಪಾರಾದರೆ ಮಲ್ಯರ ಮಾನವ ಹಕ್ಕುಗಳಿಗೆ ತೊಂದರೆಯಾಗುವುದಿಲ್ಲ ಎಂದಿದ್ದಾರೆ. ಇದರ ಜತೆಗೆ ಅವರ ಹಣಕಾಸಿನ ವ್ಯವಹಾರಗಳಲ್ಲಿಯೂ ಕೂಡ ಪ್ರಶ್ನಾರ್ಹವಾದ ಅಂಶಗಳು ಇದ್ದವು ಎಂದು ತೀರ್ಪಿನಲ್ಲಿ ಹೇಳಿದ್ದಾರೆ. “ಮಧುಮೇಹ ಮತ್ತು ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಅವರಿಗೆ ವೈಯಕ್ತಿಕ ವೈದ್ಯಕೀಯ ವ್ಯವಸ್ಥೆಗಳನ್ನು ಪೂರೈಸಲು ಅವಕಾಶ ನೀಡಲಾಗಿದೆ. ಜೈಲಿನಲ್ಲಿ ಯಾವುದೇ ರೀತಿಯ ಅಭದ್ರತೆ ಉಂಟಾದೀತು’ ಎಂಬ ವಾದಕ್ಕೆ ಅವಕಾಶವೇ ಇಲ್ಲ ಎಂದು ನ್ಯಾಯಾಧೀಶೆ ಹೇಳಿದ್ದಾರೆ.

ಲಂಡನ್‌ ಕೋರ್ಟ್‌ನಲ್ಲಿ ಸೊಮವಾರ ಭಾರತಕ್ಕೆ ಗಡಿಪಾರು ಮಾಡುವಂತೆ ತೀರ್ಪು ಪ್ರಕಟವಾಗಿದ್ದು. ನಂತರ ಮಲ್ಯ ಬಂಧನಕ್ಕೀಡಾಗಲಿದ್ದಾರೆ. ಮುಂಬಯಿನ ಅರ್ಥರ್‌ ರಸ್ತೆಯ ಜೈಲಿನ 12ನೇ ಬರಾಕ್‌ನಲ್ಲಿ ಮಲ್ಯ ಸೆರೆವಾಸದಲ್ಲಿರಬೇಕಾಗುತ್ತದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago