ನವದೆಹಲಿ:ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಕೈಗೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ನಿರ್ಣಯದಿಂದ ಮೋದಿ ಸರ್ಕಾರ ಮುಂದಿನ ದಿನಗಳಲ್ಲಿ ಮೇಲ್ವರ್ಗದ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡಲು ಕಾನೂನಿಗೆ ತಿದ್ದುಪಡಿ ತರಲಿದೆ.
ಶೇ.50ರಿಂದ ಶೇ.60ಕ್ಕೆ ಮೀಸಲಾತಿ ಪ್ರಮಾಣ ಏರಿಕೆಯಾಗಬೇಕಾಗಿದ್ದರಿಂದ ಸಂವಿಧಾನ ತಿದ್ದುಪಡಿ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಧೇಯಕ ಲೋಕಸಭೆಯಲ್ಲಿ ಹಾಗೂ ರಾಜ್ಯಸಭೆಯಲ್ಲಿ ಮಂಡನೆಯಾಗಿ ಪಾಸ್ ಆಗಬೇಕಾಗಿದೆ. ಬಳಿಕ ರಾಷ್ಟ್ರಪತಿ ಅಂಕಿತ ಬಿದ್ದ ಮೇಲೆ ತಿದ್ದುಪಡಿ ವಿಧೇಯಕ ಜಾರಿಯಾಗಲು ಸಾಧ್ಯ. ಆದರೆ ಇನ್ನೂ 2ಎರಡು ದಿನಗಳ ಕಾಲು ಮುಂದೂಡಿಕೆಯಾಗಲಿರುವ ಕಲಾಪದಲ್ಲಿ ತಿದ್ದುಪಡಿ ವಿಧೇಯಕ ಪಾಸ್ ಆಗುತ್ತದೆಯೇ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಅಲ್ಲದೇ ಮೀಸಲಾತಿ ಪ್ರಮಾಣ ಶೇ.50ಕ್ಕಿಂತ ಹೆಚ್ಚಳವಾಗಬಾರದು ಎಂಬುದಾಗಿ ಸುಪ್ರೀಂಕೋರ್ಟ್ ಕೂಡಾ ತೀರ್ಪು ನೀಡಿದೆ.
ಮೋದಿ ಸರ್ಕಾರದ ಈ ನಿರ್ಣಯದಿಂದ ಇನ್ನು ಮುಂದಿನ ದಿನಗಳಲ್ಲಿ ಎಸ್ ಸಿ, ಎಸ್ ಟಿ ಹೊರತಾಗಿ, ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗವರಿಗೂ ಮೀಸಲಾತಿ ಸಿಗಲಿದೆ.
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…
ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…